ಬೆಂಗಳೂರು : ದರ್ಶನ್, ಪವಿತ್ರಾ ಸೇರಿ ಏಳು ಮಂದಿಗೆ ಸುಪ್ರೀಂ ಕೋರ್ಟ್ ನಿಂದ ಜಾಮೀನು ರದ್ದಾದ ಹಿನ್ನೆಲೆ, ತನಿಖಾಧಿಕಾರಿ ಎಸಿಪಿ ಚಂದನ್ ಕುಮಾರ್ ಸುಪ್ರೀಂ ಕೋರ್ಟ್ ನ ಜಾಮೀನು ರದ್ದು ಆದೇಶದ ಪ್ರತಿಯನ್ನು ಪಡೆದುಕೊಂಡು, ಆ ಬಳಿಕ ವಿಚಾರಣಾಧೀನ ನ್ಯಾಯಾಲಯಕ್ಕೆ ಆದೇಶದ ಪ್ರತಿ ಸಲ್ಲಿಕೆ ಮಾಡಿ ಅರೆಸ್ಟ್ ವಾರೆಂಟ್ ಪಡೆದುಕೊಳ್ಳಲಿದ್ದಾರೆ.
ಕಾಮಾಕ್ಷಿಪಾಳ್ಯ ಪೊಲೀಸರು ಅರೆಸ್ಟ್ ವಾರೆಂಟ್ ಪಡೆದ ನಂತರ ದರ್ಶನ್, ಪವಿತ್ರಾ ಸೇರಿ ಏಳು ಮಂದಿ ಆರೋಪಿಗಳನ್ನು ಬಂಧಿಸಲಿದ್ದಾರೆ. ಅದಕ್ಕೂ ಮೊದಲೇ ಆರೋಪಿಗಳು ಸರೆಂಡರ್ ಆದರೆ ಅರೆಸ್ಟ್ ವಾರೆಂಟ್ ಪಡೆಯುವ ಅವಶ್ಯಕತೆಯಿಲ್ಲ.
ಪೊಲೀಸರು ಆರೋಪಿಗಳನ್ನು ಮೊದಲು ನ್ಯಾಯಾಲಯಕ್ಕೆ ಹಾಜರುಪಡಿಸಿ, ಬಳಿಕ ಈ ಹಿಂದೆ ಬಿಡುಗಡೆಯಾಗಿದ್ದ ಆಯಾ ಜೈಲುಗಳಿಗೆ ವರ್ಗಾಯಿಸಲಿದ್ದಾರೆ.


















