ಬೆಳಗಾವಿ: ಅನಾಚಾರ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಸ್ವಾಮೀಜಿಯನ್ನು ಭಕ್ತರು ಮಠದಿಂದ ಉಚ್ಛಾಟನೆ ಮಾಡಿರುವ ಆರೋಪ ಕೇಳಿ ಬಂದಿದೆ.
ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಶಿವಪುರ(ಹ) ಗ್ರಾಮಸ್ಥರು ಸ್ವಾಮೀಜಿಯನ್ನು ಉಚ್ಛಾಟನೆ ಮಾಡಿದ್ದಾರೆ. ಮಹಿಳೆ ಜತೆಗೆ ಸಿಕ್ಕಿಬಿದ್ದಿದ್ದ ಹಿನ್ನೆಲೆಯಲ್ಲಿ ಸ್ವಾಮೀಜಿಯನ್ನು ತರಾಟೆಗೆ ತೆಗೆದುಕೊಂಡಿರುವ ಶಿವಾಪುರ ಗ್ರಾಮಸ್ಥರು, ಮಠದಿಂದ ಹೊರ ಹಾಕಿದ್ದಾರೆ.
ಸ್ವಾಮೀಜಿಯು ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾರೆಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಠ ಬಿಟ್ಟು ಅಡವಿಸಿದ್ದರಾಮ ಸ್ವಾಮೀಜಿ ಹೊರ ನಡೆದಿದ್ದಾರೆ. ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.