ಬೆಂಗಳೂರು : ನಾಳೆ ತಮಿಳುನಾಡಿನಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ನೆಲೆಸಿರುವ ತಮಿಳುನಾಡಿನ ಮತದಾರರು ತಮ್ಮ ಊರುಗಳತ್ತ ದೊಡ್ಡ ಸಂಖ್ಯೆಯಲ್ಲಿ ಪ್ರಯಾಣ ಆರಂಭಿಸಿದ್ದಾರೆ.
ನಗರದ ಪ್ರಮುಖ ಪ್ರದೇಶಗಳಾದ ಡೇರಿ ಸರ್ಕಲ್, ವಿಲ್ಸನ್ ಗಾರ್ಡನ್, ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣ ಹಾಗೂ ಹೊಸೂರು ರಸ್ತೆಯಲ್ಲಿ ಇಂದು ಬೆಳಗ್ಗಿನಿಂದಲೇ ಜನಸಂದಣಿ ಹೆಚ್ಚಾಗಿದೆ. ವಿಶೇಷವಾಗಿ ತಮಿಳುನಾಡು ಕಡೆಗೆ ತೆರಳುವ ಬಹುತೇಕ ಬಸ್ಗಳು ಸಂಪೂರ್ಣ ಭರ್ತಿಯಾಗಿರುವ ದೃಶ್ಯ ಕಂಡುಬಂದಿದೆ.
ಈ ಹಿನ್ನಲೆಯಲ್ಲಿ ಕೆಎಸ್ಆರ್ಟಿಸಿ ಹಾಗೂ ತಮಿಳುನಾಡು ಸರ್ಕಾರದ ಸಾರಿಗೆ ಸಂಸ್ಥೆಗಳು ಹೆಚ್ಚುವರಿ ಬಸ್ಗಳನ್ನು ನಿಯೋಜಿಸಿವೆ. ಪ್ರಯಾಣಿಕರ ದಟ್ಟಣೆ ಹೆಚ್ಚಿರುವುದರಿಂದ ರಾತ್ರಿ ವೇಳೆಯಲ್ಲಿಯೂ ಹೆಚ್ಚುವರಿ ಸರ್ವೀಸ್ಗಳನ್ನು ಓಡಿಸಲಾಗುತ್ತಿದೆ.
ಬೆಂಗಳೂರು ನಗರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತಮಿಳು ಭಾಷಿಕರು ನೆಲೆಸಿರುವ ಹಿನ್ನೆಲೆ, ನಾಳಿನ ಮತದಾನದಲ್ಲಿ ಪಾಲ್ಗೊಳ್ಳಲು ಸುಮಾರು ಒಂದುವರೆ ಲಕ್ಷದಷ್ಟು ಮಂದಿ ಬೆಂಗಳೂರಿನಿಂದ ತಮಿಳುನಾಡಿಗೆ ಪ್ರಯಾಣಿಸುತ್ತಿದ್ದಾರೆ ಎಂಬ ಅಂದಾಜು ವ್ಯಕ್ತವಾಗಿದೆ.
ಮತದಾನ ಹಕ್ಕು ಚಲಾಯಿಸಲು ದೂರ ಪ್ರಯಾಣಕ್ಕೂ ಹಿಂದೇಟು ಹಾಕದ ಮತದಾರರ ಉತ್ಸಾಹ ಗಮನಾರ್ಹವಾಗಿದೆ. ಚುನಾವಣಾ ಹಿನ್ನಲೆಯಲ್ಲಿ ನಗರದಲ್ಲಿ ಸಂಚಾರ ಒತ್ತಡವೂ ಹೆಚ್ಚಾಗಿರುವುದು ಗಮನಕ್ಕೆ ಬಂದಿದೆ.
ಇದನ್ನೂ ಓದಿ : ಅನಿರ್ದಿಷ್ಟಾವಧಿ ಕದನ ವಿರಾಮ ಘೋಷಿಸಿದ ಟ್ರಂಪ್ : ‘ಶಾಂತಿದೂತ’ನ ಪಟ್ಟಕ್ಕೆ ಪಾಕಿಸ್ತಾನ ಕಸರತ್ತು!



















