ಚಿತ್ರದುರ್ಗ: ಕೌಟುಂಬಿಕ ಕಲಹದ ಹಿನ್ನೆಲೆ ಮಚ್ಚಿನಿಂದ ಹಲ್ಲೆ ಮಾಡಿರುವ ಪರಿಣಾಮ ರಕ್ತಸಿಕ್ತ ಸ್ಥಿತಿಯಲ್ಲಿ ವ್ಯಕ್ತಿಯು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ನಗರದ ಬುದ್ದ ಸರ್ಕಲ್ನಲ್ಲಿ ರಾತ್ರಿ ನಡೆದಿದೆ.
ಸ್ಥಳೀಯ ನಿವಾಸಿ ತಾಜಪೀರ್ (42) ಮೇಲೆ ಸಾದಿಕ್ ವುಲ್ಲಾ ಎಂಬಾತ ಏಕಾಏಕಿ ಮಚ್ಚಿನಿಂದ ಹಲ್ಲೆ ನಡೆಸಿದ್ದನು ಎಂದು ಆರೋಪಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ತಾಜಪೀರ್ರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ.
ಮಾಹಿತಿಯ ಪ್ರಕಾರ, ಸಾದಿಕ್ ವುಲ್ಲಾ ಮತ್ತು ಅವರ ಪತ್ನಿ ನಡುವೆ ನಡೆದ ಜಗಳವನ್ನು ಬಿಡಿಸಲು ತಾಜಪೀರ್ ಹೋಗಿದ್ದ ವೇಳೆ ಇಬ್ಬರ ಮಧ್ಯೆ ವಾಗ್ವಾದ ಉಂಟಾಗಿದೆ. ಈ ವೇಳೆ ಆಕ್ರೋಶಗೊಂಡ ಸಾದಿಕ್ ವುಲ್ಲಾ ತಾಜಪೀರ್ ಅವರ ಕತ್ತಿಗೆ ಮಚ್ಚಿನಿಂದ ಕಡಿದು ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.
ಈ ಘಟನೆ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸಾದಿಕ್ ವುಲ್ಲಾ ಮತ್ತು ತಾಜಪೀರ್ ನಡುವೆ ನಡೆದ ಗಲಾಟೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಘಟನಾ ಸ್ಥಳಕ್ಕೆ ಚಿತ್ರದುರ್ಗ ಎಸ್ಪಿ ರಂಜಿತ್ ಕುಮಾರ್ ಬಂಡಾರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಕುರಿತು ಬಡಾವಣೆ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ : ಚಿಕ್ಕಮಗಳೂರಲ್ಲಿ ಡೆಡ್ಲಿ ಆಕ್ಸಿಡೆಂಟ್ : ಜೆಸ್ಟ್ ಮಿಸ್ ಎಂದ ಪ್ರಯಾಣಿಕರು



















