ಕಾಶ್ಮೀರ ಕಣಿವೆಯಲ್ಲಿ ಉಗ್ರರ ರಣಬೇಟೆ ಮುಂದುವರಿದಿದೆ. ಇಲ್ಲಿನ ಶೋಪಿಯಾನ್ ಪ್ರದೇಶದಲ್ಲಿ ಮೂವರು ಜಿಹಾದಿಗಳು ಅಡಗಿದ್ದು, ಭಾರತೀಯ ಸೇನೆ ಭರ್ಜರಿ ಕಾರ್ಯಾಚರಣೆ ನಡೆಸಿದೆ. ಈ ವೇಳೆ ನಡೆದ ಗುಂಡಿನ ಕಾಳಗದಲ್ಲಿ ಓರ್ವ ಉಗ್ರನನ್ನು ಸೇನೆ ಹೊಡೆದುರುಳಿಸಿದೆ. ಉಗ್ರರ ಅಡಗುದಾಣದ ಖಚಿತ ಮಾಹಿತಿ ಆಧರಿಸಿ ಭಾರತೀಯ ಸೇನೆ ಮತ್ತು ಜಮ್ಮು-ಕಾಶ್ಮೀರ ಪೊಲೀಸರು ಜಂಟಿಯಾಗಿ ಕಾರ್ಯಚರಣೆ ನಡೆಸಿದ್ದರು. ಈ ವೇಳೆ ಭದ್ರತಾ ಪಡೆಗಳ ಮೇಲೆ ಉಗ್ರರು ನಿರಂತರ ಗುಂಡಿನ ದಾಳಿ ನಡೆಸಿದ್ರು. ಇದಕ್ಕುತ್ತರವಾಗಿ ಸೇನೆ ಹಾಗೂ ಪೊಲೀಸರು ಗುಂಡಿನ ಸುರಿಮಳೆಗೈದಿದ್ದಾರೆ. ಈ ಚಕಮಕಿಯಲ್ಲಿ ಓರ್ವ ಲಷ್ಕರ್ ಎ ತೋಯ್ಬಾ ಸಂಘಟನೆ ಉಗ್ರ ಹತನಾಗಿದ್ದು, ಕಾಳಗ ಮುಂದುವರಿದೆ. ಈ ನಡುವೆ ಜಮ್ಮು-ಕಾಶ್ಮೀರದಲ್ಲಿ ಹೈಅಲರ್ಟ್ ಘೋಷಿಸಲಾಗಿದ್ದು, ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.



















