ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಟೆಸ್ಟ್ ಟೂರ್ನಿಯ ಮೊದಲ ಪಂದ್ಯಕ್ಕೆ ಸ್ಟಾರ್ ಆಟಗಾರರು ಅಲಭ್ಯರಾಗುತ್ತಿರುವ ಹಿನ್ನೆಲೆಯಲ್ಲಿ ಇಬ್ಬರು ಯುವ ಆಟಗಾರರನ್ನು ಆಯ್ಕೆ ಮಾಡಲಾಗಿದೆ.
ವೈಯುಕ್ತಿಕ ಕಾರಣಗಳಿಂದಾಗಿ ರೋಹಿತ್ ಶರ್ಮಾ ಹೊರಗುಳಿದರೆ, ಮೊಣಕೈಗೆ ಗಾಯದಿಂದ ಶುಭ್ಮನ್ ಗಿಲ್ ಹಿಂದೆ ಸರಿದಿದ್ದಾರೆ. ಹೀಗಾಗಿ ಬಿಸಿಸಿಐ ಮತ್ತಿಬ್ಬರನ್ನು ತಂಡಕ್ಕೆ ಆಯ್ಕೆ ಮಾಡಿದೆ. ಅದರಂತೆ ಭಾರತ ತಂಡಕ್ಕೆ ಬ್ಯಾಕಪ್ ಆಟಗಾರನಾಗಿ ಕರ್ನಾಟಕದ ಯುವ ದಾಂಡಿಗ ದೇವದತ್ ಪಡಿಕ್ಕಲ್ ಆಯ್ಕೆಯಾಗಿದ್ದಾರೆ.
ದೇವದತ್ ಪಡಿಕ್ಕಲ್ ಆಸ್ಟ್ರೇಲಿಯಾ ಎ ವಿರುದ್ಧದ ಅನಧಿಕೃತ ಟೆಸ್ಟ್ ಪಂದ್ಯದಲ್ಲಿ ಕಾಣಿಸಿಕೊಂಡಿದ್ದರು. ಇನ್ನೊಂದೆಡೆ ಯಶ್ ದಯಾಳ್ ಸ್ಥಾನ ಪಡೆದಿದ್ದಾರೆ. ಭಾರತ ಮತ್ತು ಆಸ್ಟ್ರೇಲಿಯಾ ಮಧ್ಯೆ ನಡೆಯಲಿರುವ 5 ಪಂದ್ಯಗಳ ಟೆಸ್ಟ್ ಸರಣಿಯು ನವೆಂಬರ್ 22 ರಿಂದ ಆರಂಭವಾಗಲಿದೆ. ಎರಡನೇ ಪಂದ್ಯ ಡಿಸೆಂಬರ್ 6 ರಿಂದ ಆರಂಭವಾಗಲಿದೆ. 3ನೇ ಪಂದ್ಯ ಡಿಸೆಂಬರ್ 14 ರಿಂದ ಹಾಗೂ. ಡಿಸೆಂಬರ್ 26 ರಿಂದ ಮೆಲ್ಬೋರ್ನ್ನಲ್ಲಿ ನಾಲ್ಕನೇ ಪಂದ್ಯ ಹಾಗೂ ಜ. 3ರಂದು ಕೊನೆಯ ಪಂದ್ಯ ಆರಂಭವಾಗಲಿದೆ.
ಭಾರತ ತಂಡದಲ್ಲಿ ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ದೇವ್ದತ್ ಪಡಿಕ್ಕಲ್ ಸ್ಥಾನ ಪಡೆದಿದ್ದಾರೆ.