ನಟ ಸುದೀಪ್ ಇತ್ತೀಚೆಗೆ ನೀಡಿದ್ದ ಹೇಳಿಕೆ ಸಾಕಷ್ಟು ವೈರಲ್ ಆಗಿದ್ದು. ಇದಕ್ಕೆ ದರ್ಶನ್ ಅಭಿಮಾನಿಗಳು ಕಿಡಿಕಾರಿದ್ದರು. ಹೀಗಾಗಿ ನಟ ಸುದೀಪ್ ಸುದ್ದಿಗೋಷ್ಠಿ ಕರೆದು ಸ್ಪಷ್ಟನೆ ನೀಡಿದ್ದಾರೆ.
‘ನೋಡುವವರಿಗಾಗಿ ಸಿನಿಮಾ ಮಾಡಿ. ನೋಡದೆ ಇದ್ದವರು ನೋಡೋದು ಬೇಡ’ ಎಂದಿದ್ದರು. ಇದು ಸಾಕಷ್ಟು ಚರ್ಚೆ ಹುಟ್ಟು ಹಾಕಿತ್ತು. ದರ್ಶನ್ ಅಭಿಮಾನಿಗಳಿಗೆ ಈ ರೀತಿ ಹೇಳಿದ್ದಾರೆ ಎಂಬ ಆರೋಗಳು ಕೇಳಿ ಬಂದಿದ್ದವು. ಹೀಗಾಗಿ ಈ ಕುರಿತು ಸುದೀಪ್ ಮಾತನಾಡಿದ್ದು, ‘ಅದು ದರ್ಶನ್ ಫ್ಯಾನ್ಸ್ಗೆ ಕೊಟ್ಟ ಟಾಂಟ್ ಅಲ್ಲ. ನಾನು ಹೇಳುವುದಾದರೂ ನೇರವಾಗಿಯೇ ಹೇಳುತ್ತೇನೆ ಎಂದಿದ್ದಾರೆ.
‘ದರ್ಶನ್ ಹೊರಗೆ ಬರುವವರೆಗೂ ನಾವು ಕನ್ನಡ ಸಿನಿಮಾ ನೋಡಲ್ಲ’ ಎಂದು ದರ್ಶನ್ ಫ್ಯಾನ್ಸ್ ಹೇಳಿದ್ದರು. ಹಲವರು ಕನ್ನಡ ಸಿನಿಮಾಗಳು ಸೋಲುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದ್ದರು. ಹೀಗಾಗಿ ಹಲವಾರು ನಿರ್ಮಾಪಕರು, ನಿರ್ದೇಶಕರು, ಕಲಾವಿದರು ನಮ್ಮ ಸಿನಿಮಾ ನೋಡಿ’ ಎಂದು ಮನವಿ ಮಾಡಿದ್ದರು. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಸುದೀಪ್, ‘ನೋಡದೇ ಇದ್ದವರನ್ನು ಬಿಡಿ, ನೋಡುವವರಿಗಾಗಿ ಸಿನಿಮಾ ಮಾಡಿ ಎಂದು ಹೇಳಿಕೆ ಕೊಟ್ಟಿದ್ದರು.
ಇದು ವೈರಲ್ ಆಗಿ, ಆಕ್ರೋಶಕ್ಕೆ ಕಾರಣವಾಗಿತ್ತು. ಸದ್ಯ ಈ ಕುರಿತು ಸ್ಪಷ್ಟನೆ ನೀಡಿರುವ ಅವರು,‘ಕಲಾವಿದನ ಅಭಿಮಾನಿಗಳಿಗೆ ಹೇಳಿದೆ ಎಂದುಕೊಳ್ಳಬೇಡಿ. ಕನ್ನಡ ಇಂಡಸ್ಟ್ರಿಯಲ್ಲಿ ನಿಂತು ಕನ್ನಡ ಸಿನಿಮಾ ನೋಡಿ ಎಂದು ಭಿಕ್ಷೆ ಬೇಡುವುದು ತಪ್ಪು. ರಾಜ್ಯದಲ್ಲಿ ಕೇವಲ 30 ಲಕ್ಷ ಜನರು ಮಾತ್ರ ಸಿನಿಮಾ ನೋಡುತ್ತಿದ್ದಾರೆ. ಆ ಲೆಕ್ಕವೇ ದೊಡ್ಡ ಆಗುತ್ತದೆ. ಗತ್ತು ಬಿಟ್ಟುಕೊಡಬೇಡಿ ಎಂದು ಹೇಳಿದ್ದಾರೆ.
ಎಲ್ಲಾ ಫ್ಯಾನ್ಸ್ ಗೆ ನೊವು ಇರುತ್ತದೆ. ಆ ನೋವಲ್ಲಿ ಸಾವಿರ ಮಾತನಾಡುತ್ತಾರೆ, ಕ್ಷಮಿಸಿ ಬಿಡಿ. ನಮ್ಮ ಫ್ಯಾನ್ಸ್ ತಪ್ಪು ಮಾಡಿದರೆ ಕರೆದು ಹೇಳಬಹುದು. ಬೇರೆಯವರ ಬಗ್ಗೆ ನಮಗೆ ಗೊತ್ತಿಲ್ಲ. ಆ ಅಧಿಕಾರವೂ ಬೇಡ. ನಾನು ಕರೆಕ್ಷನ್ ಮಾಡೋಕೆ ಹುಟ್ಟಿಲ್ಲ. ಸರಿ ಹೋಗಲು ಟೈಮ್ ಕೊಡಿ. ಏನಾದರೂ ಇದ್ದರೆ ನೇರವಾಗಿ ಹೇಳುತ್ತೇನೆ ಎಂದು ಹೇಳಿದ್ದಾರೆ.