ಬೆಂಗಳೂರು: ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿದ್ದ ಯುವಕ ವಾರ ಕಳೆದರೂ ಪೊಲೀಸರಿಗೆ ಮಾತ್ರ ಸಿಕ್ಕಿಲ್ಲ.
1600ಕ್ಕೂ ಅಧಿಕ ಸಿಸಿಟಿವಿ ಕ್ಯಾಮೆರಾ ನೋಡಿ ಹುಡುಕಾಟ ನಡೆಸಿದರೂ ಆರೋಪಿ ಮಾತ್ರ ಪೊಲೀಸರಿಗೆ ಸಿಕ್ಕಿಲ್ಲ. ಸುದ್ದಗುಂಟೆಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಬರೋಬ್ಬರಿ 7 ದಿನಗಳ ಹಿಂದೆ ನಡೆದಿತ್ತು. ಆರೋಪಿಗಾಗಿ ಪೊಲೀಸರು ನಾಲ್ಕು ವಿಶೇಷ ತಂಡಗಳಲ್ಲಿ 25 ಜನ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಬೆಂಗಳೂರು ಟು ಕೃಷ್ಣಗಿರಿಯವರೆಗೂ ಕಾರ್ಯಾಚರಣೆ ನಡೆಸಲಾಗಿದೆ. ಆದರೂ ಆರೋಪಿ ಮಾತ್ರ ಪತ್ತೆಯಾಗಿಲ್ಲ.
ಘಟನೆ ನಡೆದ ದಿನವೇ ಆರೋಪಿ ಬೆಂಗಳೂರಿನಿಂದ ಹೊರಗೆ ಹೋಗಿರುವ ಶಂಕೆ ವ್ಯಕ್ತವಾಗುತ್ತಿದೆ. ಬೈಕ್ ನಲ್ಲಿ ಹೋಗಿದ್ದ ಆರೋಪಿ ಹೊಸೂರು ಮಾರ್ಗವಾಗಿ ಸಂಚಾರ ನಡೆಸಿರಬಹುದು ಎನ್ನಲಾಗಿದೆ.
ಬಟ್ಟೆ, ಮಾರ್ಗ ಮತ್ತು ವಾಹನಗಳ ಬದಲಿಸಿಕೊಂಡು ಆರೋಪಿ ಸಂಚಾರ ಮಾಡಿರಬಹುದು ಎಂದು ಶಂಕಿಸಲಾಗಿದೆ. ಆರೋಪಿಗಾಗಿ ಸುದ್ದಗುಂಟೆಪಾಳ್ಯ ಪೊಲೀಸರು ಹಗಲಿರುಳು ಹುಟುಕಾಟ ನಡೆಸುತ್ತಿದ್ದಾರೆ. ಆರೋಪಿಯು ಯುವತಿಗೆ ಕಿರುಕುಳ ನೀಡಿ ಪರಾರಿಯಾಗಿದ್ದಾನೆ. ಆತನಿಗಾಗಿ ತಮಿಳುನಾಡಿನಲ್ಲಿ ಎರಡು ತಂಡ ಬೀಡು ಬಿಟ್ಟಿವೆ.