ಬೆಂಗಳೂರು: ಅಡ್ವಾನ್ಸ್ ನೀಡಿದ್ದ ಮಾಲೀಕನನ್ನೇ ತಂದೆ-ಮಗ (father-son) ಸೇರಿಕೊಂಡು ಹತ್ಯೆ ಮಾಡಿರುವ ಘಟನೆ ನಡೆದಿದೆ.
ಇಲ್ಲಿನ ಕಡಬಗೆರೆ ಕ್ರಾಸ್ನ ಆರ್.ಆರ್.ಇಂಡಸ್ಟ್ರೀಸ್ನಲ್ಲಿ ನಡೆದಿದೆ. ರಮೇಶ್ ಕೊಲೆಯಾದ ಆರ್.ಆರ್.ಇಂಡಸ್ಟ್ರೀಸ್ ಮಾಲೀಕ. ಸೈಯದ್ ತಾಜುದ್ದೀನ್(50) ಮತ್ತು ಸೈಯದ್ ಅಯೂಬ್ ಬಂಧಿತ ಆರೋಪಿಗಳು. ಈ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಮೇಶ್ ಬಳಿ ಇಬ್ಬರು ಕೆಲಸಗಾರರು 6 ಲಕ್ಷ ರೂ ಅಡ್ವಾನ್ಸ್ ಪಡೆದಿದ್ದರು. ಆದರೆ ಸರಿಯಾಗಿ ಕೆಲಸಕ್ಕೆ ಬರುತ್ತಿರಲಿಲ್ಲ ಎನ್ನಲಾಗಿದೆ. ಅಲ್ಲದೇ, ಹಣ ಕೇಳಿದ್ದಕ್ಕೆ ರಮೇಶ್ ಗೆ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಇದೇ ವಿಷಯವಾಗಿ ಗಲಾಟೆ ನಡೆದು, ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.