ಕಲಬುರ್ಗಿ: ಸರ್ಕಾರಿ ಶಾಲಾ ಶಿಕ್ಷಕಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳು ಬಳಿಕ ನಡು ರಸ್ತೆಯಲ್ಲೇ ಸುಟ್ಟು ಹಾಕಿದರು ದಾರುಳ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಕಲ್ಮೂಡ ಗ್ರಾಮದಲ್ಲಿ ನಡೆದಿದೆ.
ಕಲಬುರಗಿ ನಗರದ ಆನಂದ್ ಕಾಲೋನಿ ನಿವಾಸಿಯಾಗಿರುವ ಜ್ಯೋತಿ ಕಪಾಳೆ ಹಿರೇಮಠ (57) ಕೊಲೆಯಾದ ಸರ್ಕಾರಿ ಶಾಲೆ ಶಿಕ್ಷಕಿ. ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ವಂಜರಖೇಡ ಗ್ರಾಮದಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡ್ತಿದ್ದ ಜ್ಯೋತಿ ಬೀದರ್ನಲ್ಲೆ ಮನೆ ಮಾಡಿ ಶಾಲೆಗೆ ಹೋಗಿ ಬರ್ತಿದ್ದಳು. ವಾರಕ್ಕೊಂದು ಬಾರಿ ಕಲಬುರಗಿಗೆ ಬಂದು ವಾಪಸ್ ತೇರಳುತ್ತಿದ್ದಳು.
ಹೀಗೆ ಜ್ಯೋತಿ ಈ ಬಾರಿಯೂ ಕಲಬುರಗಿಯಿಂದ ಬೀದರ್ಗೆ ತೇರಳುವಾಗ ಮಾರ್ಗ ಮಧ್ಯದ ಕಮಲಾಪುರದ ಕಲ್ಮೂಡನಲ್ಲಿ ಕೊಲೆಯಾಗಿದ್ದಾಳೆ. ಜ್ಯೋತಿಯನ್ನ ನಡು ರಸ್ತೆಯಲ್ಲೇ ಕೊಲೆ ಮಾಡಿದ ದುಷ್ಕರ್ಮಿಗಳು ಐದು ಲೀಟರ್ ಪೆಟ್ರೋಲ್ ಹಾಕಿದ್ದ ಸುಟ್ಟು ಹಾಕಿದ್ದಾರೆ.
ಬಳಿಕ ಪೊಲೀಸರು ಅಪರಿಚಿತ ಶವ ಪತ್ತೆ ಪ್ರಕರಣ ದಾಖಲಿಸಿಕೊಂಡಿದ್ದರು. ತನಿಖೆ ವೇಳೆಯಲ್ಲಿ ಕಲಬುರಗಿ ನಿವಾಸಿ ಕೊಲೆಯಾಗಿರೋದು ಎಂದು ಬೆಳಕಿಗೆ ಬಂದಿದೆ. ಈ ಘಟನಾ ಸಂಬಂಧ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಾಲಾಗಿದೆ.
ಇದನ್ನೂ ಓದಿ : ಬೈಕ್ಗೆ ಗೂಡ್ಸ್ ವಾಹನ ಡಿಕ್ಕಿ – ಅರಣ್ಯ ಇಲಾಖೆಯ ಇಬ್ಬರು ವಾಚರ್ಸ್ ಸಾವು



















