ಮೈಸೂರು: ಮಗಳು ಬೇರೆಯೊಬ್ಬನೊಂದಿಗೆ ಓಡಿ ಹೋಗಿದ್ದಕ್ಕೆ ನೊಂದ ಕುಟುಂಬಸ್ಥರು ಮರ್ಯಾದೆಗೆ ಅಂಜಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆದರೂ ಮುಖ ನೋಡಲು ಬಾರದ ಮಗಳು ಕಟುಕತನ ಮೆರೆದಿದ್ದಾಳೆ. ಇಡೀ ಮಾನವ ಸಂಕುಲವೇ ಮಗಳ ವರ್ತನೆಗೆ ಧಿಕ್ಕಾರ ಎನ್ನುತ್ತಿದೆ.
ಮೈಸೂರಿನ (Mysuru) ಹೆಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಹದೇವಸ್ವಾಮಿ, ಪತ್ನಿ ಮಂಜುಳಾ, ಮಗಳು ಹರ್ಷಿತಾ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಗಳು. ಮಹದೇವ ಸ್ವಾಮಿ ಅವರ ದೊಡ್ಡ ಮಗಳು ಯುವಕನೊಬ್ಬನನ್ನು ಪ್ರೀತಿಸಿ ಮನೆ ಬಿಟ್ಟು ಹೋಗಿದ್ದಳು. ಇದರಿಂದ ಮನನೊಂದು ಮೂವರು ಹಗ್ಗಕಟ್ಟಿಕೊಂಡು ಬೂದನೂರು ಕೆರೆಗೆ ಹಾರಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ.
ಆದರೆ, ಓಡಿ ಹೋದವಳು ಮಾತ್ರ ತನ್ನ ಅಪ್ಪ, ಅಮ್ಮ, ತಂಗಿಯ ಮಾರಿ ನೋಡಲು ಸಹ ಬಂದಿಲ್ಲ. ಮಹದೇವಸ್ವಾಮಿ ಹಿರಿಯ ಪುತ್ರಿ ಅರ್ಪಿತಾ ಯುವನಕೊಂದಿಗೆ ಪ್ರೀತಿಯಲ್ಲಿ ಬಿದ್ದು ಮನೆಬಿಟ್ಟು ಹೋಗಿದ್ದ ಕಟುಕಿ ಎನ್ನಲಾಗಿದೆ. ಗ್ರಾಮದಲ್ಲಿ ಮಳೆಯ ನಡುವೆಯೇ ಮೂವರ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಇಡೀ ಗ್ರಾಮವೇ ಘಟನೆಗೆ ಕಣ್ಣೀರು ಸುರಿಸಿದೆ.