ಬೆಂಗಳೂರು: ಮೋಹಕ ತಾರೆ , ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಮುಂದಿನ ಸಿನಿಮಾ ಯಾವುದು ಎನ್ನುವ ಕುತೂಹಲ ಕರುನಾಡ ಪ್ರೇಕ್ಷಕರನ್ನು ಕಾಡುತ್ತಿದೆ. ಈಗ ಈ ಕುರಿತು ರಮ್ಯಾರಿಂದಲೇ ಸ್ಪಷ್ಟನೆ ಸಿಕ್ಕಿದೆ.
ಉತ್ತರಕಾಂಡ ಸಿನಿಮಾದಲ್ಲಿ ರಮ್ಯಾ ಕಂಗೋಳಿಸೋದು ಫೈನಲ್ ಆಗಿತ್ತು. ಆದರೆ, ಸ್ಪಷ್ಟ ಉತ್ತರ ಸಿಗಲಿಲ್ಲ. ಈಗ ‘ಮನದ ಕಡಲು’ ಡೈರೆಕ್ಟರ್ ಯೋಗರಾಜ್ ಭಟ್ ನಿರ್ದೇಶನದ ಸಿನಿಮಾದಲ್ಲಿ ಮೋಹಕ ತಾರೆ ಮಿನುಗಿ ಮಿಂಚುವುದು ಪಕ್ಕಾ ಆಗಿರುವುದು ಅಚ್ಚರಿಯಿಲ್ಲ. ಹಿಂದೆ ‘ರಂಗ SSLC’ ಸಿನಿಮಾದಲ್ಲಿ ಭಟ್ಟರ ನಿರ್ದೇಶನದಲ್ಲಿ ಕಿಚ್ಚ ಸುದೀಪ್ – ರಮ್ಯಾ ಅದ್ಭುತ ಅಭಿನಯ ಮಾಡಿದ್ದರು. ಈಗ ಮತ್ತೊಮ್ಮೆ ರಮ್ಯಾ-ಯೋಗರಾಜ್ ಭಟ್ ಕಾಂಬಿನೇಷನ್ ಒಟ್ಟಾಗಿ ಕೆಲಸ ಮಾಡುವ ಇಚ್ಛೆ ವ್ಯಕ್ತ ಪಡಿಸಿದ್ದಾರೆ. ‘ಮನದ ಕಡಲು’ ನಿರ್ಮಾಪಕರುಗಳಾದ ಇ.ಕೃಷ್ಣಪ್ಪ ಮತ್ತು ಜಿ.ಗಂಗಾಧರ್ ಅವರೇ ರಮ್ಯಾ -ಯೋಗರಾಜ್ ಭಟ್ ಮುಂದಿನ ಸಿನಿಮಾವನ್ನು ನಿರ್ಮಾಣ ಮಾಡಲು ಆಸೆ ವ್ಯಕ್ತಪಡಿಸಿದ್ದಾರೆ. ರಮ್ಯಾ ಒಡೆತನದ ಆ್ಯಪಲ್ ಬಾಕ್ಸ್ ಸಹಯೋಗದಲ್ಲಿ ಇ.ಕೆ.ಎಂಟರ್ ಟೈನರ್ ನಡಿ ಈ ಸಿನಿಮಾ ಸಿದ್ಧವಾಗಲಿದೆ.
ಈ ಬಗ್ಗೆ ರಮ್ಯಾ ಅವರೆ ಆಸಕ್ತಿದಾಯಕವಾಗಿ ಮಾತನಾಡಿದ್ದಾರೆ. ‘ಮನದ ಕಡಲು’ ಸಿನಿಮಾದ ನೀಲಿ ನೀಲಿ ಕಡಲು ಎಂಬುವ ಹಾಡನ್ನ ಬಿಡುಗಡೆ ಮಾಡುವ ಸಂದರ್ಭದಲ್ಲಿ ರಮ್ಯಾ ಈ ಮಾತನ್ನ ಆಡಿದ್ದಾರೆ. ಮಾರ್ಚ್ 28 ರಂದು ‘ಮನದ ಕಡಲು’ ಸಿನಿಮಾ ಬಿಡುಗಡೆಯಾದ ನಂತರ ರಮ್ಯಾ- ಯೋಗರಾಜ್ ಭಟ್ ಕಾಂಬೋ ಸಿನಿಮಾದ ಶುರುವಿನ ಸುದ್ದಿ ಕೇಳಬಹುದು.