ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ದಸರಾ ಹಿನ್ನೆಲೆಯಲ್ಲಿ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
3 ದಿನಗಳ ಕಾಲ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಶುಕ್ರವಾರ ಬೆಳಗ್ಗೆ ಮೈಸೂರಿಗೆ ತೆರಳಲಿರುವ ಸಿಎಂ, 2 ದಿನ ದಸರಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಅಕ್ಟೋಬರ್ 11ರಂದು ಬೆಳಗ್ಗೆ 10.25ಕ್ಕೆ ಮೈಸೂರಿಗೆ ಆಗಮಿಸುವ ಸಿಎಂ, ಅ.12ರಂದು ಬೆಳಗ್ಗೆ 10ಕ್ಕೆ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಲಿದ್ದಾರೆ. ಅ. 12ರಂದು ಮಧ್ಯಾಹ್ನ 1.41ರಿಂದ 2.10ರವರೆಗೆ ಅರಮನೆಯ ಬಲರಾಮ ದ್ವಾರದ ಆವರಣದಲ್ಲಿ ನಂದಿ ಧ್ವಜಕ್ಕೆ ಪೂಜೆಯಲ್ಲಿ ಭಾಗಿಯಾಗಲಿದ್ದಾರೆ. ಸಂಜೆ 4ರಿಂದ 4.30ರವರೆಗೆ ಜಂಬೂಸವಾರಿಗೆ ಚಾಲನೆ ನೀಡಲಿದ್ದು, ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ವಿಜಯದಶಮಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.
ಸಂಜೆ 7ಕ್ಕೆ ಬನ್ನಿಮಂಟಪ ಮೈದಾನದಲ್ಲಿ ಪಂಜಿನ ಕವಾಯತು, ಟಾರ್ಚ್ ಲೈಟ್ ಪರೇಡ್ ನಲ್ಲಿ ಭಾಗವಹಿಸಲಿದ್ದಾರೆ. ಅ.13ರಂದು ಬೆಳಗ್ಗೆ 11ಕ್ಕೆ ಕಡಕೋಳದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ನಂತರ 11.30ಕ್ಕೆ ಮೈಸೂರಿನಿಂದ ನಿರ್ಗಮಿಸಲಿದ್ದಾರೆ. ಅ.13ರಂದು ಮೈಸೂರಿನಿಂದ ಹೊರಡಲಿರುವ ಸಿಎಂ ಸಿದ್ದರಾಮಯ್ಯ ಧಾರವಾಡ ಮತ್ತು ಬೆಳಗಾವಿಗೆ ಜಿಲ್ಲಾಗಳಿಗೂ ಭೇಟಿ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.