ಮೈಸೂರು: ಮಕ್ಕಳಿಗೆ ತೊಟ್ಟಿಲು ಶಾಸ್ತ್ರ ಮಾಡುವುದು ಸಾಮಾನ್ಯ. ಆದರೆ, ಇಲ್ಲೊಂದು ಕುಟುಂಬ ಕರುವಿಗೆ ತೊಟ್ಟಿಲು ಶಾಸ್ತ್ರ ಮಾಡಿ, ಸರಯೂ ಎಂದು ಹೆಸರಿಟ್ಟು ಸಂಭ್ರಮಿಸಿದ್ದಾರೆ.
ಸೌಮ್ಯ ಎಂಬ ಹಸುವಿನ ಕರುವಾಗಿದ್ದು,ಶಾರದಾ ವಿಲಾಸ ಕಾಲೇಜಿನ ಹಿಂಭಾಗದ ಕೆ.ಆರ್. ವನಂನಲ್ಲಿ 3 ವರ್ಷಗಳಿಂದ ಪುಂಗನೂರು ಎಂಬ ಆಂಧ್ರಪ್ರದೇಶ ಮೂಲದ ದೇಸಿ ಹಸುಗಳನ್ನು ಮಧುಸೂದನ ತಾತಾಚಾರ್ಯ ಮತ್ತು ಕುಟುಂಬದವರು ಸಾಕುತ್ತಿದ್ದಾರೆ.
ಮನೆಯ ಶೆಡ್ನಲ್ಲಿ ಸಿರಿ, ನಿಧಿ, ಸಿಹಿ ಎಂಬ ಹಸುಗಳನ್ನೂ ಸಾಕುತ್ತಿದ್ದು, ಸಿರಿಯ ಮಗಳಾದ ಭುವಿ ಮತ್ತು ನಿಧಿಯ ಮಗಳಾದ ಸ್ವಾತಿ ಎಂಬ ಕರುಗಳಿಗೆ ಇತ್ತೀಚೆಗಷ್ಟೆ ತೊಟ್ಟಿಲು ಶಾಸ್ತ್ರವನ್ನು ಕುಟುಂಬಸ್ಥರು ನೆರವೇರಿಸಿದ್ದರು.
ಕೇವಲ ಹಾಲು ಉತ್ಪಾದನೆ ಮತ್ತು ಹಣ ಸಂಪಾದನೆಯನ್ನು ಗುರಿಯಾಗಿ ಇಟ್ಟುಕೊಳ್ಳದೆ ದೇಸಿ ಗೋವುಗಳನ್ನು ಸ್ವತಃ ಬೆಳೆಸುವುದು ಅಥವಾ ಅವುಗಳನ್ನು ಬೆಳೆಸುವ ಗೋಶಾಲೆಗಳಿಗೆ ಎಲ್ಲ ರೀತಿಯ ಸಹಕಾರ ನೀಡುವುದು. ಸಮಾಜ ಒಗ್ಗಟ್ಟಿನಿಂದ ನಿಂತು ಮಾಡಬೇಕಾದ ಜವಾಬ್ದಾರಿಯುತ ಕೆಲಸವಾಗಿದೆ ಎಂದು ಕುಟುಂಬಸ್ಥರು ಹೇಳಿದ್ದಾರೆ.
ಇದನ್ನೂ ಓದಿ : ಯಾದಗಿರಿ | ಕೇಕ್ ಬದಲಿಗೆ ಹಣ್ಣು, ತರಕಾರಿ ಕಟ್ ಮಾಡಿ ವರ್ಷದ ಕೊನೆಯ ದಿನ ಆಚರಿಸಿದ ರೈತ



















