ಬೆಂಗಳೂರು ಗ್ರಾಮಾಂತರ: RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತದಿಂದ ಅಭಿಮಾನಿಗಳ ಸಾವು ಸಂಭವಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಅವ್ಯವಸ್ಥೆ ವಿರುದ್ಧ ಬಿಜೆಪಿ ಯುವ ಮೊರ್ಚಾ ರಾಜ್ಯಾಧ್ಯಕ್ಷ ಹಾಗೂ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಕಿಡಿಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದುರಂತಕ್ಕೆ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ. 10 ಲಕ್ಷ ರೂ. ಪರಿಹಾರ ಘೋಷಿಸಿರುವುದು ನಿಮ್ಮ ಸರ್ಕಾರಕ್ಕೆ ಘನತೆ, ಗೌರವ ತರಲ್ಲ. ಮೃತರ ಕುಟುಂಬಕ್ಕೆ ಸರ್ಕಾರ ಮತ್ತು ಐಪಿಎಲ್ ಪ್ರಾಂಚೈಸಿಯಿಂದ ತಲಾ ಒಂದು ಕೋಟಿ ರೂ. ಪರಿಹಾರ ಕೊಡಿಸಿ. ಈ ಪ್ರಕರಣದಲ್ಲಿ ರಾಜಕೀಯ ಮಾಡೋ ಪ್ರಶ್ನೇ ಇಲ್ಲ. ಈ ಘಟನೆಗೆ ಯಾರು ಕಾರಣ ಆಗ್ತಾರೋ ಅವರನ್ನ ಜೈಲಿಗೆ ಕಳಿಸಿ.
ನಿಮ್ಮ ನಮಸಾಕ್ಷಿಗೆ ನಾವು ಮಾಡಿರೋದು ತಪ್ಪು ಅನಿಸಿದರೆ ನೀವು ಕೂಡ ಜೈಲಿಗೆ ಹೋಗಿ ಎಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ವಿರುದ್ಧ ಶಾಸಕ ಧೀರಜ್ ಮುನಿರಾಜ್ ವಾಗ್ದಾಳಿ ನಡೆಸಿದ್ದಾರೆ.