ಚಾಮರಾಜನಗರ: ಲಿಂಗದೀಕ್ಷೆ ಪಡೆದು ಮಠಾಧೀಶನಾಗಿದ್ದ ಮುಸ್ಲಿಂ ವ್ಯಕ್ತಿಯ ಸಲಿಂಗ ಕಾಮಪುರಾಣ ಇದೀಗ ಬಟಾ ಬಯಲಾಗಿದೆ.
ಯಾದಗಿರಿ ಜಿಲ್ಲೆಯ ಶಹಪುರ ಮೂಲದ ಮೊಹಮದ್ ನಿಸಾರ್ ತನ್ನ ಮೂಲ ಧರ್ಮ ಮರೆಮಾಚಿದ್ದ. ಈ ವಿಷಯವನ್ನು ಯಾರಿಗೂ ತಿಳಿಸದೆ ಚೌಡಹಳ್ಳಿ ಗುರುಮಲ್ಲೇಶ್ವರ ಶಾಖಾ ಮಠಕ್ಕೆ ಮಠಾಧೀಶನಾಗಿದ್ದ. ಮತಾಂತರಗೊಂಡ ವಿಷಯ ತಿಳಿಯುತ್ತಲೇ ತನ್ನ ಹಿನ್ನೆಲೆ ಹೇಳಿಕೊಂಡಿದ್ದ.
ಬಸವಕಲ್ಯಾಣದ ಬಸವಪ್ರಭು ಸ್ವಾಮೀಜಿಯಿಂದ ಜಂಗಮದೀಕ್ಷೆ ಪಡೆದುಕೊಂಡಿರುವುದಾಗಿ ಹೇಳಿದ್ದ. ಗ್ರಾಮಸ್ಥರಿಂದ ಆಕ್ರೋಶ ವ್ಯಕ್ತವಾಗುತ್ತಲೇ ತನಗೆ ಸಂಬಂಧಿಸಿದ ವಸ್ತುಗಳನ್ನು ತೆಗೆದುಕೊಂಡು ಬೈಕ್ನಲ್ಲಿ ಪರಾರಿಯಾಗಿದ್ದ. ಇದೀಗ ಮೊಹಮದ್ ನಿಸಾರ್ ಓರ್ವ ಸಲಿಂಗಕಾಮಿ ಎಂದು ತಿಳಿದು ಬಂದಿದೆ.
ಮೊಹಮದ್ ನಿಸಾರ್ ತನ್ನ ಕೋಣೆಯಲ್ಲಿ ಕುಡಿದು ತೂರಾಡುತ್ತಿರುವ ಮತ್ತು ಯುವಕನೋರ್ವನ ಜೊತೆ ಸರಸವಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಮಠಾಧೀಶನಾಗಿದ್ದ ಮೊಹಮದ್ ನಿಸಾರ್ ತನ್ನದೇ ಮೊಬೈಲ್ನಲ್ಲಿ ಅಶ್ಲೀಲ ಫೋಟೋ ಮತ್ತು ವಿಡಿಯೋಗಳನ್ನು ಇರಿಸಿಕೊಂಡಿದ್ದ.
ಇದೀಗ ವಿಡಿಯೋ ವೈರಲ್ ಆಗಿದ್ದು, ಸ್ವಾಮೀಜಿಯ ನಿಜಸ್ವರೂಪ ಕಂಡು ಗ್ರಾಮಸ್ಥರು ಶಾಕ್ ಆಗಿದ್ದಾರೆ. ಮೂರು ದಿನಗಳ ಹಿಂದೆ ಮುಸ್ಲಿಂರು ಧರಿಸುವ ಟೋಪಿಯನ್ನು ಆನ್ಲೈನ್ ಮೂಲಕ ನಿಜಲಿಂಗಸ್ವಾಮೀಜಿ ತರಿಸಿಕೊಂಡಿದ್ದ. ಇದು ಗ್ರಾಮಸ್ಥರ ಅನುಮಾನಕ್ಕೆ ಕಾರಣವಾಗಿತ್ತು. ಈ ಬಗ್ಗೆ ವಿಚಾರಿಸಿದಾಗ ಆತ ಮತಾಂತರಗೊಂಡಿರುವ ವಿಷಯ ತಿಳಿದಿತ್ತು. ಮತಾಂತರವಾದ ನಂತರವೂ ನಿಜಲಿಂಗ ಸ್ವಾಮೀಜಿ, ತನ್ನ ದಾಖಲೆಗಳಲ್ಲಿ ಹಿಂದಿನ ಹೆಸರು ಮೊಹಮದ್ ನಿಸಾರ್ ಎಂದು ಉಳಿಸಿಕೊಂಡಿದ್ದ..
ನಿಜಲಿಂಗ ಸ್ವಾಮೀಜಿಯ ನಿಜಸ್ವರೂಪ ಗೊತ್ತಾಗುತ್ತಿದ್ದಂತೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು. ಈಗ ಪೀಠತ್ಯಾಗ ಮಾಡುವುದಾಗಿ ಹೇಳಿ ಸದ್ದಿಲ್ಲದೆ ಜಾಗ ಖಾಲಿ ಮಾಡಿದ್ದಾನೆ. ನಿಸಾರ್ ಮೊಹಮದ್ ನಿಂದ ಅಕ್ಷರ ದಾಸೋಹ, ಶೈಕ್ಷಣಿಕ ಕ್ರಾಂತಿ ಮಾಡಿದ ವೀರಶೈವ ಲಿಂಗಾಯತ ಧರ್ಮಕ್ಕೆ ದ್ರೋಹ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶವ್ಯಕ್ತವಾಗಿದೆ.