ಮುಂಬೈ: ಲವ್ ಜಿಹಾದ್(Love Jihad) ಪ್ರಕರಣಗಳ ವಿರುದ್ಧ ಕಟ್ಟು ನಿಟ್ಟಿನ ಕಾನೂನು ಜಾರಿಗೊಳಿಸಲು ಮಹಾರಾಷ್ಟ್ರ ಸರ್ಕಾರ ಮುಂದಾಗಿದ್ದು, ಅದಕ್ಕಾಗಿ ಈಗಾಗಲೇ ಏಳು ಸದಸ್ಯರ ಸಮಿತಿಯನ್ನೂ ರಚಿಸಿದೆ. ಈ ಸಮಿತಿಯಲ್ಲಿ ಮಹಾನಿರ್ದೇಶಕ (ಡಿಜಿಪಿ) ಸಂಜಯ್ ವರ್ಮಾ ನೇತೃತ್ವದ ಈ ಸಮಿತಿಯು ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಅಲ್ಪಸಂಖ್ಯಾತ ವ್ಯವಹಾರಗಳು, ಕಾನೂನು ಮತ್ತು ನ್ಯಾಯಾಂಗ, ಸಾಮಾಜಿಕ ನ್ಯಾಯ, ವಿಶೇಷ ನೆರವು ಮತ್ತು ಗೃಹ ಇಲಾಖೆಗಳಂತಹ ಪ್ರಮುಖ ಇಲಾಖೆಗಳ ಹಿರಿಯ ಅಧಿಕಾರಿಗಳು ಇರಲಿದ್ದಾರೆ.
ಮೂಲಗಳ ಪ್ರಕಾರ, ಲವ್ ಜಿಹಾದ್ ಗೆ ಸಂಬಂಧಿಸಿದ ದೂರುಗಳನ್ನು ನಿಭಾಯಿಸಲು ಕ್ರಮಗಳನ್ನು ಸಮಿತಿಯು ಸೂಚಿಸಲಿದ್ದು, ಇದು ಇತರ ರಾಜ್ಯಗಳಲ್ಲಿ ಅಸ್ತಿತ್ವದಲ್ಲಿರುವ ಕಾನೂನುಗಳನ್ನು ಸಹ ಪರಿಶೀಲಿಸಲಿದೆ.
ಸಮಿತಿ ರಚನೆ ಬಗ್ಗೆ ಸರ್ಕಾರದ ನಿರ್ಧಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾಗಿದೆ, ಎನ್ಸಿಪಿ (ಶರದ್ ಪವಾರ್) ನಾಯಕಿ ಸುಪ್ರಿಯಾ ಸುಳೆ “ಮದುವೆಯಾಗುವುದು ಅಥವಾ ಪ್ರೀತಿಸುವುದು ವೈಯಕ್ತಿಕ ಆಯ್ಕೆ ಎಂದು ಹೇಳಿದ್ದಾರೆ. ಸರ್ಕಾರವು ನಿಜವಾದ ಸಮಸ್ಯೆಗಳ ಮೇಲೆ ಗಮನಹರಿಸಬೇಕೆಂದು ನಾನು ವಿನಂತಿಸುತ್ತೇನೆ. ಅಮೆರಿಕ ಹೊಸ ಸುಂಕಗಳನ್ನು ವಿಧಿಸಿದೆ, ಇದು ನಮ್ಮ ದೇಶದ ಮೇಲೆ ಪರಿಣಾಮ ಬೀರುತ್ತದೆ. ಸರ್ಕಾರವು ಅಂತಹ ವಿಷಯಗಳಿಗೆ ಗಮನ ಕೊಡಬೇಕು”ಎಂದು ಸುಳೆ ಹೇಳಿದರು.
ಸಮಾಜವಾದಿ ಪಕ್ಷದ ಶಾಸಕ ಅಬು ಅಜ್ಮಿ, ಸರ್ಕಾರವು ಮುಸ್ಲಿಮರಿಗೆ ಕಿರುಕುಳ ನೀಡುವ ಮತ್ತು ಕೋಮುವಾದವನ್ನು ಹರಡುವುದರ ಮೇಲೆ ಮಾತ್ರ ಗಮನಹರಿಸಿದೆ ಎಂದು ಹೇಳಿದರು. ಲವ್ ”ಜಿಹಾದ್” ಒಂದು ಊಹಾಫೋಹ ಎಂದು ಕಾಂಗ್ರೆಸ್ ನಾಯಕ ಹುಸೇನ್ ದಲ್ವಾಯಿ ಪ್ರತಿಪಾದಿಸಿದರು. ಹೇಳಿದರು.
ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡ ಬಿಜೆಪಿ ಶಾಸಕ ಮಂಗಲ್ ಲೋಧಾ, ದೇಶಾದ್ಯಂತ “ಲವ್ ಜಿಹಾದ್” ಪ್ರಕರಣಗಳು ಹೆಚ್ಚುತ್ತಿವೆ. ಶ್ರದ್ಧಾ ವಾಕರ್ ಅವರನ್ನು ಎಷ್ಟು ತುಂಡುಗಳಾಗಿ ಕತ್ತರಿಸಲಾಗಿದೆ ಎಂದು ನಾವೆಲ್ಲರೂ ನೋಡಿದ್ದೇವೆ. ಮಹಾರಾಷ್ಟ್ರದಲ್ಲಿ ಅಂತಹ ಹಲವು ಪ್ರಕರಣಗಳಿವೆ ಎಂದು ಹೇಳಿದ್ದಾರೆ.