ಚಾಮರಾಜನಗರ: ಸರ್ಕಾರಿ ಶಾಲೆಯ ಬೀಗ ಮುರಿದು ಕಿಡಿಗೇಡಿಗಳು ಅವಾಂತರ ಸೃಷ್ಟಿಸಿರುವ ಘಟನೆ ನಡೆದಿದೆ.

ಚಾಮರಾಜನಗರದ ರಾಮ ಸಮುದ್ರದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಬೀಗ ಮುರಿದು ಒಳ ನುಗ್ಗಿದ್ದ ಕಿಡಿಗೇಡಿಗಳು, ಎಲ್ಲಾ ಕೊಠಡಿಗಳ ಬೀಗ ಒಡೆದು ಒಳ ನುಗ್ಗಿ, ಅಲ್ಲಿದ್ದ ವಸ್ತುಗಳನ್ನೆಲ್ಲ ಧ್ವಂಸ ಮಾಡಿದ್ದಾರೆ. ಅಡುಗೆ ಸಾಮಾಗ್ರಿ, ಹಾಲಿನ ಪೌಡರ್ ನಾಶ ಮಾಡಿದ್ದಾರೆ. ಅಲ್ಲದೇ, ಶಾಲಾ ದಾಖಲಾತಿ ಚೆಲ್ಲಾಪಿಲ್ಲಿ ಮಾಡಿ, ಅಡುಗೆ ಕೋಣೆಯಲ್ಲಿ ವಿಕೃತಿ ಮೆರೆದು ಹೋಗಿದ್ದಾರೆ ಎನ್ನಲಾಗಿದೆ.
ಕೊಠಡಿಗಳ ಬಾಗಿಲು ಮುರಿದು ಹಾನಿ ಮಾಡಿದ್ದಾರೆ. ಸ್ಥಳಕ್ಕೆ ಪೂರ್ವ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.