ಮಂಡ್ಯ : ರಾತ್ರಿ ವೇಳೆ ನಿದ್ದೆಯಲ್ಲಿದ್ದ ಸಂದರ್ಭದಲ್ಲಿ ವೇಳೆ ರೋಗಿಗಳ ಮೊಬೈಲ್ ದೋಚಿ ಖದೀಮರು ಪರಾರಿಯಾಗಿರುವ ಘಟನೆ ನಡೆದಿದೆ.
ಶ್ರೀರಂಗಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ವಾರ್ಡ್ ಗಳಲ್ಲಿದ್ದ ರೋಗಿಗಳು ಹಾಗೂ ಸಂಬಂಧಿಕರ ಮೊಬೈಲ್ ಕಳ್ಳತನ ಮಾಡಲಾಗಿದೆ. ಮದ್ಯರಾತ್ರಿ ಆಸ್ಪತ್ರೆಯ ವಾರ್ಡ್ ಗೆ ನುಗ್ಗಿ ಕಳ್ಳ ಕೈ ಚಳಕ ತೋರಿಸಿದ್ದಾರೆ. ಒಳ ರೋಗಿಗಳ ವಾರ್ಡ್ ನಲ್ಲಿ 5 ಮೊಬೈಲ್ ಗಳನ್ನು ಖದೀಮರು ಎಗರಿಸಿದ್ದಾರೆ.
ಆಸ್ಪತ್ರೆಯಲ್ಲಿ ಯಾವುದೇ ಭದ್ರತೆ ಇಲ್ಲದಿರುವುದನ್ನು ಗಮನಿಸಿದ ಕಳ್ಳ, ತನ್ನ ಕೈ ಚಳಕ ತೋರಿಸಿದ್ದಾನೆ. ಕೆಟ್ಟು ನಿಂತ ಸಿಸಿಟಿವಿ ಹಾಗೂ ಸೆಕ್ಯೂರಿಟಿ ಸಿಬ್ಬಂದಿ ಇಲ್ಲದೆ ಇರುವುದನ್ನು ತಿಳಿದು ಈ ಕೃತ್ಯ ಎಸಗಿದ್ದಾನೆಂದು ರೋಗಿಗಳು ಹಾಗೂ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆಯಿಂದಾಗಿ ರೋಗಿಗಳು ತೀವ್ರ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಭದ್ರತೆ ಇಲ್ಲದಕ್ಕೆ ಆಸಮಧಾನ ವ್ಯಕ್ತಪಡಿಸುತ್ತಿದ್ದಾರೆ. ಸ್ಥಳಕ್ಕೆ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ತನಿಖೆ ಕೈಗೊಂಡಿದ್ದಾರೆ.