ಬೆಂಗಳೂರು: ರಾಜ್ಯಪಾಲರು ಹಾಗೂ ರಾಜ್ಯ ಸರ್ಕಾರದ ನಡುವಿನ ಸಂಘರ್ಷ ಮತ್ತೆ ಮುಂದುವರೆದಿದೆ.
ರಾಜ್ಯ ಸರ್ಕಾರದ ಮಸೂದೆಗಳನ್ನು ರಾಜ್ಯಪಾಲರು ಒಂದರ ಮೇಲೊಂದರಂತೆ ಮರಳಿ ಕಳುಹಿಸುತ್ತಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಅಂಗೀಕಾರಗೊಂಡಿರುವ ನಾಲ್ಕು ವಿಧೇಯಕಗಳನ್ನು ಅಂಗೀಕಾರಕ್ಕಾಗಿ ರಾಜ್ಯ ಸರ್ಕಾರ ರಾಜ್ಯಪಾಲರಿಗೆ ಕಳುಹಿಸಿತ್ತು. ಆದರೆ, ಈ ವಿಧೇಯಕಗಳಿಗೆ ಸಹಿ ಹಾಕದೆ ರಾಜ್ಯಪಾಲರು ಮರಳಿ ಕಳುಹಿಸಿದ್ದಾರೆ.
ರಾಜ್ಯಪಾಲರ ಈ ನಡೆಯಿಂದ ರಾಜ್ಯ ಸರ್ಕಾರ ಆಕ್ರೋಶಗೊಂಡಿದೆ. ಅಲ್ಲದೇ, ರಾಜ್ಯ ಸರ್ಕಾರದ ವಿರುದ್ಧ ಕಾನೂನು ಕ್ರಮದ ಮೊರೆ ಹೋಗಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಕರ್ನಾಟಕ ಮಿನರಲ್ಸ್ ಹಕ್ಕು ಮತ್ತು ಬೇರಿಂಗ್ ಲ್ಯಾಂಡ್ ಟ್ಯಾಕ್ಸ್ ಬಿಲ್ 2024, ಕರ್ನಾಟಕ ಹಿಂದೂ ಧಾರ್ಮಿಕಸಂಸ್ಥೆಗಳು ಮತ್ತು ಮುಜರಾಯಿ ವಿಧೇಯಕ 2024, ಕರ್ನಾಟಕ ಸಹಕಾರಿ ಸೊಸೈಟಿ ಗಳ ತಿದ್ದುಪಡಿ ವಿಧೇಯಕ 2024, ಗದಗ-ಬೆಟಗೇರಿ ವ್ಯಾಪಾರ, ಸಂಸ್ಕೃತಿ ಮತ್ತು ವಸ್ತು ಪ್ರದರ್ಶನ ಪ್ರಾಧಿಕಾರ ವಿಧೇಯಕ 2024 ಮಸೂದೆಗಳಿಗೆ ರಾಜ್ಯಪಾಲರು ಉಳಿಸಿಕೊಂಡಿದ್ದಾರೆ. ಹೀಗಾಗಿ ರಾಜ್ಯಪಾಲರು ಹಾಗೂ ರಾಜ್ಯ ಸರ್ಕಾರದ ಮಧ್ಯೆ ಇದ್ದ ದ್ವೇಷ ಮತ್ತಷ್ಟು ಹದಗೆಟ್ಟಿದೆ.