ಮಂಗಳೂರು: ಕರುಣೆ ಇಲ್ದ ಮಾಲೀಕನೋರ್ವ ಸಾವನ್ನಪ್ಪಿದ ಕೂಲಿ ಕಾರ್ಮಿಕನ ಶವವನ್ನು ರಸ್ತೆಯಲ್ಲೇ ಬಿಟ್ಟು ಹೋಗಿರುವ ಘಟನೆ ನಡೆದಿದೆ.
ಈ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ಚಿಕ್ಕಮೂಡ್ನೂರು ಗ್ರಾಮದ ಶಿವಪ್ಪ(70 ) ಸಾವನ್ನಪ್ಪಿರುವ ಕಾರ್ಮಿಕ ಎನ್ನಲಾಗಿದೆ. ಇವರ ಶವವನ್ನೇ ಮಾಲೀಕ ರಸ್ತೆ ಬದಿ ಇಟ್ಟು ಹೋಗಿದ್ದಾನೆ.
ಸಾಲ್ಮರ ತಾವ್ರೋ ಇಂಡಸ್ಟ್ರೀಸ್ ಸಂಸ್ಥೆಯ ಮಾಲಕ ಹೆನ್ರಿ, ಗಾರೆ ಕೆಲಸಕ್ಕೆ ಕಾರ್ಮಿಕ ಶಿವಪ್ಪರನ್ನು ಕರೆಸಿಕೊಂಡಿದ್ದ. ಆದರೆ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಶಿವಪ್ಪ ಸಾವನ್ನಪ್ಪಿದ್ದರು. ಆನಂತರ ಮೃತದೇಹವನ್ನ ಪಿಕ್ ಅಪ್ ವಾಹನದಲ್ಲಿ ತಂದು ಕುಟುಂಬದವರಿಗೆ ಮಾಹಿತಿ ನೀಡದೆ ಮನೆಯ ಪಕ್ಕದಲ್ಲೇ ಇರಿಸಿ ಹೋಗಿದ್ದಾರೆ. ಆನಂತರ ರಸ್ತೆ ಬದಿಯಲ್ಲಿದ್ದ ಶಿವಪ್ಪ ಅವರ ಮೃತದೇಹವನ್ನು ಮಗಳು ಹಾಗೂ ಪತ್ನಿ ಗಮನಿಸಿದ್ದಾರೆ. ಶಿವಪ್ಪ ಸಾವನ್ನಪ್ಪಿದಾಗ ಆಸ್ಪತ್ರೆಗೂ ಅವರು ಕರೆದುಕೊಂಡು ಹೋಗಿಲ್ಲ. ಹೀಗಾಗಿ ಇದು ಹಲವಾರು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಆರೋಪಿ ಹೆನ್ರಿ ತಲೆ ಮರೆಸಿಕೊಂಡಿದ್ದು, ಮಾಲೀಕನನ್ನು ಬಂಧಿಸುವಂತೆ ದಲಿತ ಸಂಘಟನೆಗಳು ಹಾಗೂ ಕುಟುಂಬಸ್ಥರು ಆಗ್ರಹಿಸಿದ್ದಾರೆ.