ಹುಬ್ಬಳ್ಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು ಕಾಲುವೆಯಲ್ಲಿ ವ್ಯಕ್ತಿಯೊಬ್ಬ ಕೊಚ್ಚಿಕೊಂಡು ಹೋಗಿರುವ ಘಟನೆ ನಡೆದಿದೆ.
ಈ ಘಟನೆ ಹುಬ್ಬಳ್ಳಿಯ ಬೆಳಗಲಿ ರಸ್ತೆಯಲ್ಲಿ ನಡೆದಿದೆ. ಬೈಕ್ ನಲ್ಲಿ ಹೋಗುತ್ತಿದ್ದ ಹುಸೇನ್ ನಾಪತ್ತೆಯಾಗಿದ್ದಾರೆ. ಹುಸೇನ್ ಗಾಗಿ ಚರಂಡಿ ಕಾಲುವೆಯುದ್ದಕ್ಕೂ ಹುಡುಕಾಟ ನಡೆಸಲಾಗುತ್ತಿದೆ. ಅಗ್ನಿಶಾಮಕ ದಳ ಮತ್ತು ಪೊಲೀಸ್ ಸಿಬ್ಬಂದಿಯಿಂದಲೂ ಹುಸೇನ್ಗಾಗಿ ಶೋಧ ಕಾರ್ಯ ಮುಂದುವರೆದಿದೆ.
ಈ ಬಗ್ಗೆ ಪ್ರತ್ಯಕ್ಷದರ್ಶಿ ರಫೀಕ್ ಮಾತನಾಡಿ, ರಾತ್ರಿ ಬೈಕ್ ನಲ್ಲಿ ಹೋಗುತ್ತಿದ್ದಾಗ ಹುಸೇನ್ ಕಾಲುವೆಯಲ್ಲಿ ಜಾರಿ ಬಿದ್ದಿದ್ದಾರೆ. ಆತನಿಗಾಗಿ ರಾತ್ರಿಯಿಡಿ ಹುಡುಕಾಟ ನಡೆಸಲಾಗಿದೆ. ಆದರೆ, ಇದುವರೆಗೂ ಆತನ ಪತ್ತೆಯಾಗಿಲ್ಲ ಎಂದು ಹೇಳಿದ್ದಾರೆ.