ಚಿತ್ರದುರ್ಗ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಟೊಮೆಟೋ ಬೆಳೆದ ರೈತರ ಬದುಕು ಬೀದಿಗೆ ಬಂದು ನಿಲ್ಲುವಂತಾಗಿದೆ.
ಇತ್ತೀಚೆಗಷ್ಟೇ ಒಂದು ಕೆಂಪು ಸುಂದರಿಗೆ ಎಲ್ಲಿಲ್ಲದ ಬೇಡಿಕೆ ಬಂದಿತ್ತು. ಇದನ್ನು ಗಮನಿಸಿದ್ದ ರೈತರು ಸಾಲಶೂಲ ಮಾಡಿ ಟೊಮೆಟೋ ಬೆಳೆದಿದ್ದರು. ಆದರೆ, ಈಗ ಕೈಗೆ ಪುಡಿಗಾಸು ಸಿಗುತ್ತಿಲ್ಲ. ಹೀಗಾಗಿ ರೈತರು ಕಂಗಾಲಾಗುವಂತಾಗಿದೆ. ಮಾರುಕಟ್ಟೆಯಲ್ಲಿ ಟೊಮೆಟೋಗೆ ಸರಿಯಾದ ದರ ಇಲ್ಲದ ಹಿನ್ನೆಲೆಯಲ್ಲಿ ತಾವೇ ಬೆಳೆದ ಟೊಮೆಟೋವನ್ನು ಟ್ರ್ಯಾಕ್ಟರ್ ಮೂಲಕ ರೈತರು ನಾಶ ಮಾಡುತ್ತಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೇಡರೆಡ್ಡಿಹಳ್ಳಿ ಗ್ರಾಮದಲ್ಲಿನ ರೈತರೊಬ್ಬರು 1 ಎಕರೆ ಜಮೀನಲ್ಲಿ 1.5 ಲಕ್ಷಕ್ಕೂ ಹೆಚ್ಚು ಹಣ ಖರ್ಚು ಮಾಡಿ ಟೊಮೆಟೋ ಬೆಳೆದಿದ್ದರು. ರೈತ ಕರಿಯಣ್ಣ ಎಂಬುವವರು ಟೊಮೆಟೋ ಬೆಳೆದಿದ್ದರು. ಈಗ ಬೆಲೆ ಕುಸಿತವಾಗಿರುವ ಹಿನ್ನೆಲೆಯಲ್ಲಿ ಮನನವೊಂದು ಟ್ರ್ಯಾಕ್ಟರ್ ಮೂಲಕ ಬೆಳೆ ನಾಶ ಮಾಡಿದ್ದಾರೆ.