ಬಾಗಲಕೋಟೆ: ಕೋಡಿಮಠದ ಸ್ವಾಮೀಜಿ ಮತ್ತೊಮ್ಮೆ ಭಯಾನಕ ಭವಿಷ್ಯ ನುಡಿದಿದ್ದಾರೆ.
ಸಂಗಮೇಶ ನಲಿವನೆ, ಆದರೆ, ಒಳ ಡ್ಡ ಬಂದಿದೆ ಎಂದು ಹೇಳಿದ್ದಾರೆ. ಸಂಕ್ರಾಂತಿ ಭವಿಷ್ಯ ರಾಜರಿಗೆ, ದೊಡ್ಡ ದೊಡ್ಡ ವ್ಯಾಪಾರಿಗಳಿಗೆ ಹಡಗಿನಲ್ಲಿ ಬರುವಂತವರಿಗೆ ಬರುತ್ತದೆ. ಸಂಕ್ರಾಂತಿವರೆಗೆ ಯಾವ ಬದಲಾವಣೆ ದೋಷ ಕಾಡುತ್ತಿಲ್ಲ. ಇಲ್ಲಿವರೆಗೂ ರಾಜನ ಬದಲಾವಣೆ ಆಗುವ ಯಾವುದೇ ಸಾಧ್ಯತೆ ಇಲ್ಲ ಎಂದಿದ್ದಾರೆ.
ಹೊಳೆಯನ್ನು ಈಜಿದರೆ ಬದಲಾವಣೆ ಆಗಬಹುದು. ಆ ಶಕ್ತಿ ಇದ್ದರೆ, ನಾನು ಹಿಂದೆಯೇ ಹೇಳಿದಂತೆ ಹಾಲುಮತದವರಿಗೆ ಅಧಿಕಾರ ಬಂದರೆ ಬಿಡಿಸಿಕೊಳ್ಳುವುದು ಕಷ್ಟ. ಕಷ್ಟ ಅವರಾಗಿಯೇ ಬಿಡಬೇಕು. ಯಾಕೆಂದರೆ ವಿಜಯನಗರ ಸಾಮ್ರಾಜ್ಯ ಹಕ್ಕಬುಕ್ಕರು ಕಟ್ಟಿದ್ದು. ಇವತ್ತು ಅದೇ ಚಿಹ್ನೆಯಲ್ಲಿ ಮೈಸೂರು ದಸರಾ ನಡೆಯುತ್ತಿದೆ. ಹಾಲು ಕೆಟ್ಟರೂ ಹಾಲುಮತ ಕೆಡುವುದಿಲ್ಲ. ಆಂತವರ ಕೈಲಿ ಅಧಿಕಾರ ಸಿಕ್ಕಿರುವುದರಿಂದ ಬಿಡಿಸುವುದು ಕಷ್ಟ. ಅವರಾಗಿಯೇ ಬಿಟ್ಟರೆ ನಿಮಗೆ ಸಿಗುತ್ತದೆ ಎಂದು ಹೇಳಿದ್ದಾರೆ.