ಬೆಂಗಳೂರು: ಸಾರಿಗೆ ಇಲಾಖೆ ನೌಕರರ ಬೇಡಿಕೆಗಳು ನ್ಯಾಯಬದ್ಧವಾಗಿbz. ಆದರೆ ನೌಕರರು ಸರ್ಕಾರದ ಸ್ಥಿತಿಯನ್ನು ಸಹ ಗಮನದಲ್ಲಿಟ್ಟುಕೊಳ್ಳಬೇಕು. ಮುಖ್ಯಮಂತ್ರಿಗಳು ಮತ್ತು ಸಾರಿಗೆ ಇಲಾಖೆ ಸಚಿವರು ನೌಕರರಿಗೆ ಸಹಾಯ ಮಾಡುವ ಮನಸ್ಥಿತಿಯಲ್ಲಿದ್ದಾರೆ. ರಾಜ್ಯದ ಸಾಮಾನ್ಯ ನಾಗರಿಕರಿಗೆ ಆಗುತ್ತಿರುವ ತೊಂದರೆಗಳನ್ನು ನೌಕರರು ಅರ್ಥಮಾಡಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದ್ದಾರೆ.
ನಾಗರಿಕರ ಯೋಗಕ್ಷೇಮ ಮುಖ್ಯವಾಗುತ್ತದೆ. ಹೀಗಾಗಿ ದಯವಿಟ್ಟು ಸರ್ಕಾರದ ಜೊತೆ ಸಹಕರಿಸಿ ಎಂದು ಸಾರಿಗೆ ಇಲಾಖೆ ನೌಕರರಿಗೆ ನಾನು ಮನವಿ ಮಾಡುತ್ತೇನೆ. ಮುಷ್ಕರದ ಮಧ್ಯೆ ಕರ್ತವ್ಯಕ್ಕೆ ಹಾಜರಾಗಿರುವ ಕೆಲವು ಬಸ್ ಕಂಡಕ್ಟರ್, ಡ್ರೈವರ್ ಗಳಿಗೆ ನಾನು ಅಭಿನಂದನೆ ಹೇಳುತ್ತೇನೆ. ಸಾರ್ವಜನಿಕರ ಬದುಕು ಬಹಳ ಮುಖ್ಯವಾಗುತ್ತದೆ. ನೀವು ಹಠ ಮಾಡಬೇಡಿ. ಸರ್ಕಾರ ಸಾಧ್ಯವಿರುವ ಸಹಾಯ ಮಾಡುತ್ತದೆ. ದಯವಿಟ್ಟು ಅರ್ಥ ಮಾಡಿಕೊಳ್ಳಿ, ಕೋರ್ಟ್ ಕೂಡ ಮುಷ್ಕರ ನಡೆಸದಂತೆ ನಿರ್ದೇಶನ ನೀಡಿದೆ. ಕಾನೂನಿಗೆ ಕೂಡ ಗೌರವ ಕೊಡದೆ ಹಠಬಿದ್ದು ಮುಷ್ಕರ ಮಾಡಬೇಡಿ. ಸಹಕಾರ ನೀಡಿ ಎಂದು ಮನವಿ ಮಾಡಿದ್ದಾರೆ.



















