ಚೆನ್ನೈ: ಮಹೇಂದ್ರ ಸಿಂಗ್ ಧೋನಿ ಈ ಬಾರಿ ಕೊನೆಯ ಐಪಿಎಲ್ ಆಡುವರೇ. ನಿವೃತ್ತಿ ಘೋಷಿಸಿ ವಿಶ್ರಾಂತ ಜೀವನ ನಡೆಸುವರೇ? ಈ ರೀತಿಯ ಒಂದು ಚರ್ಚೆ ಶುರುವಾಗಿದೆ. ಧೋನಿ ಮೈದಾನಲ್ಲಿ ತೆಗೆದುಕೊಳ್ಳುವ ಕೆಲ ನಿರ್ಧಾರಗಳು ಅಚ್ಚರಿಯೋ ಹಾಗೆ ಅವರು ಕ್ರಿಕೆಟ್ ವೃತ್ತಿ ಬಗ್ಗೆಯೂ ಅಷ್ಟೇ ಆಘಾತಕಾರಿ ನಿರ್ಧಾರ ತೆಗೆದುಕೊಂಡಿದ್ದಾರೆ.
ಸದ್ಯ ಅವರು ಐಪಿಎಲ್ ಮಾತ್ರ ಆಡುತ್ತಿದ್ದಾರೆ. ಕಳೆದ ಮೂರು ವರ್ಷಗಳಿಂದ ಧೋನಿ ಇಂದು, ನಾಳೆ ಐಪಿಎಲ್ಗೆ ನಿವೃತ್ತಿ ಹೇಳುತ್ತಾರೆ ಎಂಬ ವರದಿಗಳು ಬಂದರೂ ಅದಕ್ಕೊಂದು ಸ್ಪಷ್ಟ ಉತ್ತರ ಸಿಕ್ಕಿರಲಿಲ್ಲ. ಇದೀಗ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ರೀತಿಯಲ್ಲೇ ಐಪಿಎಲ್ಗೂ ದಿಢೀರ್ ವಿದಾಯ ಹೇಳುವ ರಹಸ್ಯ ಸೂಚನೆ ನೀಡಿದ್ದಾರೆ.
ಮಾರ್ಚ್ 22 ರಿಂದ ಆರಂಭವಾಗಲಿರುವ 18ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಪಾಲ್ಗೊಳ್ಳಲು ಬುಧವಾರ ಚೆನ್ನೈಗೆ ಬಂದಿಳಿದಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಿಂದ ಹೊರನಡೆಯುತ್ತಿದ್ದಂತೆ ಧೋನಿಯ ಟಿ-ಶರ್ಟ್ನಲ್ಲಿನ ಕೋಡ್ ವರ್ಡ್ ಕಂಡಿದ್ದು ಅದರು ಕುತೂಹಲ ಕೆರಳಿಸಿದೆ.
ಧೋನಿ ಧರಿಸಿದ್ದ ಕಪ್ಪು ಬಣ್ಣದ ಟಿ-ಶರ್ಟ್ನಲ್ಲಿ ಮೋರ್ಸ್ ಕೋಡ್ಗಳಿರುವ ಗ್ರಾಫಿಕ್ ಇತ್ತು. ಅದರ ರಹಸ್ಯವನ್ನು ನೆಟ್ಟಿಗರು ತ್ವರಿತವಾಗಿ ಡಿಕೋಡ್ ಮಾಡಿದ್ದಾರೆ. ಈ ವೇಳೆ ಇದರ ಅರ್ಥ ‘ಒನ್ ಲಾಸ್ಟ್ ಟೈಮ್'(ಒಂದು ಕೊನೆಯ ಅವಕಾಶ) ಎಂದು ತಿಳಿದುಬಂದಿದೆ. ಹೀಗಾಗಿ ಧೋನಿ ನಿವೃತ್ತಿ ಹೇಳುತ್ತಾರೆ ಎನ್ನಳಾಗಿದೆ
ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಶಿಬಿರವು ಮುಂದಿನ ವಾರದಿಂದ ಪ್ರಾರಂಭವಾಗಲಿದೆ. ಇದಕ್ಕೂ ಮುಂಚಿತವಾಗಿ ಧೋನಿ ಚೆನ್ನೈಗೆ ಆಗಮಿಸಿದ್ದಾರೆ. ಕಳೆದೊಂದು ತಿಂಗಳಿನಿಂದ ಧೋನಿ ರಾಂಚಿ ಕ್ರಿಕೆಟ್ ಅಕಾಡೆಮಿಯಲ್ಲಿ ಕ್ರಿಕೆಟ್ ಅಭ್ಯಾಸ ನಡೆಸಿದ್ದರು. ಇದಕ್ಕೆ ಸಂಬಂಧಿಸಿದ ಹಲವು ವಿಡಿಯೊಗಳು ವೈರಲ್ ಆಗಿತ್ತು.
ಬಾರಿಯ ಟೂರ್ನಿಯಲ್ಲಿ ಧೋನಿ ತಮ್ಮ ಬ್ಯಾಟ್ನ ತೂಕವನ್ನು ಇಳಿಸಿ ಆಡಲಿದ್ದಾರೆ ಎನ್ನಲಾಗಿದೆ. ಸಾಮಾನ್ಯವಾಗಿ ಧೋನಿ 1250-1300 ಗ್ರಾಂ ತೂಕದ ಬ್ಯಾಟ್ನೊಂದಿಗೆ ಆಡುತ್ತಾರೆ. ಆದರೆ ಈ ಬಾರಿ ಕನಿಷ್ಠ 10-20 ಗ್ರಾಂಗಳಷ್ಟು ತೂಕವನ್ನು ಕಡಿಮೆ ಮಾಡಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.
ಚೆನ್ನೈ ತಂಡ
ಋತುರಾಜ್ ಗಾಯಕ್ವಾಡ್, ಮಥೀಶ ಪತಿರಾಣ, ಶಿವಂ ದುಬೆ, ರವೀಂದ್ರ ಜಡೇಜಾ, ಎಂಎಸ್ ಧೋನಿ, ನೂರ್ ಅಹ್ಮದ್, ಆರ್. ಅಶ್ವಿನ್, ಡೆವೊನ್ ಕಾನ್ವೇ, ರಚಿನ್ ರವೀಂದ್ರ, ರಾಹುಲ್ ತ್ರಿಪಾಠಿ, ಖಲೀಲ್ ಅಹ್ಮದ್, ವಿಜಯ್ ಶಂಕರ್, ಸ್ಯಾಮ್ ಕರನ್, ಅಂಶುಲ್ ಕಂಬೋಜ್, ಶೇಕ್ ರಶೀದ್, ಮುಕೇಶ್ ಚೌಧರಿ, ದೀಪಕ್ ಹೂಡಾ, ಗುರುಜಪ್ನೀತ್ ಸಿಂಗ್ ,ನಾಥನ್ ಎಲ್ಲಿಸ್, ಜೇಮಿ ಓವರ್ಟನ್, ಕಮಲೇಶ್ ನಾಗರಕೋಟಿ, ರಾಮಕೃಷ್ಣ ಘೋಷ್, ಶ್ರೇಯಸ್ ಗೋಪಾಲ್, ವಂಶ್ ಬೇಡಿ, ಆಂಡ್ರೆ ಸಿದ್ಧಾರ್ಥ್.