ಬೆಂಗಳೂರು | ರಾಜ್ಯದ ನಿಗಮ ಮಂಡಳಿಗಳ ಅಧ್ಯಕ್ಷರ ಎರಡು ವರ್ಷಗಳ ಅವಧಿ ಮುಗಿದಿದ್ದು, ಇನ್ನೇನು ಹೊಸಬರಿಗೆ ಅವಕಾಶ ಲಭಿಸಲಿದೆ ಎನ್ನುವಷ್ಟರಲ್ಲಿ ರಾಜ್ಯ ಸರ್ಕಾರದಿಂದ ಅಚ್ಚರಿಯ ಆದೇಶ ಹೊರಬಿದ್ದಿದೆ.
ಹೌದು.. ರಾಜ್ಯ ರಾಜಕಾರಣದ ಇತ್ತೀಚಿನ ಬೆಳವಣಿಗೆ ಹಿನ್ನೆಲೆ ಅವಧಿ ಮುಗಿಸಿದ ಅಧ್ಯಕ್ಷರುಗಳ ಅವಧಿಯನ್ನೇ ವಿಸ್ತರಣೆ ಮಾಡಿ ಸರ್ಕಾರ ಆದೇಶ ಪ್ರಕಟಿಸಿದೆ. ಇದರೊಂದಿಗೆ ಸುಮಾರು 35ಕ್ಕೂ ಹೆಚ್ಚು ಶಾಸಕರು ಹಾಗೂ 45ಕ್ಕೂ ಹೆಚ್ಚು ಪಕ್ಷದ ಪದಾಧಿಕಾರಿಗಳು ಹಾಗೂ ಮುಖಂಡರನ್ನು ಒಳಗೊಂಡಿದ್ದ ರಾಜ್ಯದ 80ಕ್ಕೂ ಹೆಚ್ಚು ವಿವಿಧ ನಿಗಮಗಳ ಅಧ್ಯಕ್ಷರು ಮತ್ತಷ್ಟು ಕಾಲ ಅಧ್ಯಕ್ಷರಾಗಿಯೇ ಮುಂದುವರಿಯಲಿದ್ದಾರೆ.
ಸಿಬ್ಬಂದಿ & ಆಡಳಿತ ಸುಧಾರಣೆ ಇಲಾಖೆ ಮುಂದಿನ ಆದೇಶದವರೆಗೂ ಅಧ್ಯಕ್ಷರಾಗಿ ಮುಂದುವರಿಸಿ ಆದೇಶ ಹೊರಡಿಸಿದೆ. ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಬಿಎಯ ವಿವಿಧ ಪಾಲಿಕೆಗಳ ಚುನಾವಣೆಗಳ ಹಿನ್ನೆಲೆಯಲ್ಲಿ ಹಾಲಿ ಅಧ್ಯಕ್ಷರನ್ನು ಅಧಿಕಾರದಿಂದ ಬಿಡುಗಡೆಗೊಳಿಸಿದರೆ ಅದರಿಂದ ಅಡ್ಡ ಪರಿಣಾಮ ಉಂಟಾಗಬಹುದು ಎನ್ನುವ ಕಾರಣಕ್ಕೆ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗಿದೆ.
ಇದನ್ನೂ ಓದಿ : ಬೀದರ್ನಲ್ಲಿ ಭೀಕರ ರಸ್ತೆ ಅಪಘಾತ | ಯುವ ಉದ್ಯಮಿ ಸಾವು!



















