ಬೆಂಗಳೂರು: ರಾಜ್ಯದ ಅಲ್ಲಲ್ಲಿ ಅಕಾಲಿಕ ಮಳೆಯಾಗುತ್ತಿದೆ. ಹಲವೆಡೆ ಬೇಸಿಗೆಯ ಬೇಗೆ ಜನರನ್ನು ಹೈರಾಣಾಗಿಸಿದೆ. ಈ ಮಧ್ಯೆ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಗ್ರಾಮೀಣ ಪ್ರದೇಶದಲ್ಲಂತೂ ಕುಡಿಯುವ ನೀರಿಗಾಗಿ ಜನರು ಪರಿತಪಿಸುತ್ತಿದ್ದಾರೆ.
ಬೇಸಿಗೆಯಿಂದಾಗಿ ನೀರಿನ ಮೂಲಗಳು ಬತ್ತಿ ಹೋಗಿವೆ. ಕರಾವಳಿ, ಮಲೆನಾಡು ಭಾಗದ ಕೆಲವು ಜಿಲ್ಲೆಗಳಲ್ಲೂ ನೀರಿಗೆ ಹಾಹಾಕಾರ ಉಂಟಾಗಿದೆ. ಉತ್ತರ ಕರ್ನಾಟಕದ ವಿಜಯನಗರ, ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಧಾರವಾಡ, ಬಾಗಲಕೋಟೆ ಸೇರಿದಂತೆ ಕೆಲವು ಜಿಲ್ಲೆಗಳ ತಾಲೂಕುಗಳಲ್ಲಿ ನೀರಿಗೆ ಹಾಹಾಕಾರ ಉಂಟಾಗಿದೆ.
ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಕರಾವಳಿ ಭಾಗದ ದಕ್ಷಿಣ ಕನ್ನಡ, ಉತ್ತರ ಕನ್ನಡ, ದಕ್ಷಿಣ ಒಳನಾಡಿನ ತುಮಕೂರು, ಚಾಮರಾಜನಗರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಕುಡಿಯುವ ತೊಂದರೆ ನಿರ್ಮಾಣವಾಗಿದೆ ಎನ್ನಲಾಗಿದೆ. ಬೇಸಿಗೆ ಇನ್ನೂ ಒಂದು ತಿಂಗಳು ಇರಲಿದ್ದು, ಅಧಿಕಾರಿಗಳು ನೀರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಸಾರ್ವಜನಿಕರು ಮನವಿ ಮಾಡುತ್ತಿದ್ದಾರೆ.