ಬೆಂಗಳೂರು: ವಿಕೃತ ಮನಸ್ಥಿತಿಯ ಪಾಪಿಗಳು ಮತ್ತೆ ಬಾಲ ಬಿಚ್ಚಿದ್ದು, ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದಿರುವ ಘಟನೆ ನಡೆದಿದೆ.
ದೊಡ್ಡ ಆಲದ ಮರ ಸಮೀಪ ಸೂಲಿವಾರದಲ್ಲಿ ಈ ಘಟನೆ ನಡೆದಿದೆ. ಕಿರಾತಕರು ಮತ್ತೊಮ್ಮೆ ಹಸುವಿನ ಮೇಲೆ ಕ್ರೌರ್ಯ ಮೆರೆದಿದ್ದಾರೆ. ಪಾಪಿಗಳು ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಹಸುವಿನ ಕೆಚ್ಚಲು ಕೊಯ್ದಿದ್ದಾರೆ ಎನ್ನಲಾಗಿದೆ. ಸುಮಾರು 5 ಗಂಟೆಗಳ ಕಾಲ ಶಸ್ತ್ರ ಚಿಕಿತ್ಸೆ ನಡೆಸಿದರೂ ಚಿಕಿತ್ಸೆ ಫಲಕಾರಿಯಾಗದೆ ಹಸು ಸಾವನ್ನಪ್ಪಿದೆ.
ಸೂಲಿವಾರದ ಡೇರಿ ಅಧ್ಯಕ್ಷ ಮರಿಬಸವಯ್ಯನವರ ಹಸುವಿನ ಕೆಚ್ಚಲು ಕೊಯ್ದಿದ್ದಾರೆ. ಪಕ್ಕದ ಜಮೀನಿಗೆ ಹಸು ಮೇಯಲು ಹೋದಾಗ ಈ ಘಟನೆ ನಡೆದಿದೆ ಎಂದು ಮಾಲೀಕರು ಆರೋಪಿಸಿದ್ದಾರೆ. ಈ ಕುರಿತು ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.