ಬೆಂಗಳೂರು: ಟೀಸರ್ ಹಾಗೂ ಹಾಡುಗಳ ಮೂಲಕ ಈಗಾಗಲೇ ಜನರನ್ನು ತಲುಪಿರುವ “ಮಾಂಕ್ ದಿ ಯಂಗ್” ಚಿತ್ರದ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಯಾಯಿತು.
ನಟ “ಕೃಷ್ಣ” ಅಜಯ್ ರಾವ್, ನಿರ್ದೇಶಕ ಸಿಂಪಲ್ ಸುನಿ, ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು, ನಟ ಬಬ್ಲು ಪೃಥ್ವಿರಾಜ್, ನಟ ನಿಶ್ಚಿತ್ ಸೇರಿದಂತೆ ಹಲವರು ಈ ಚಿತ್ರದ ಟ್ರೇಲರ್ ಅನಾವರಣ ಮಾಡಿದರು.
ನಟ ಅಜಯ್ ರಾವ್ ಮಾತನಾಡಿ, ಟ್ರೇಲರ್ ನೋಡಿದಾಗ ಹೊಸತಂಡದ ಚಿತ್ರ ಎಂದು ಹೇಳಲಾಗುವುದಿಲ್ಲ. ಅಷ್ಟು ಚೆನ್ನಾಗಿದೆ. ಚಿತ್ರ ಕೂಡ ಉತ್ತಮವಾಗಿ ಬಂದಿರುತ್ತದೆ ಎಂಬುವುದು ಟ್ರೇಲರ್ ನಿಂದ ತಿಳಿಯುತ್ತದೆ ಎಂದು ಹೇಳಿದ್ದಾರೆ.
ಇಡೀ ತಂಡದ ಶ್ರಮದಿಂದ ಒಂದೊಳ್ಳೆ ಚಿತ್ರ ನಿರ್ಮಾಣವಾಗಿದೆ. ಈ ಚಿತ್ರ ನಿಮಗೆ ಬೇಸರ ತರಿಸದೆ, ನಿಮ್ಮನ್ನು ಎರಡು ಗಂಟೆಗಳ ಕಾಲ ಹಿಡಿದಿಟ್ಟುಕೊಳ್ಳುತ್ತದೆ. ಅಂತಹ ಉತ್ತಮ ಕಥಾಹಂದರ ಹೊಂದಿದೆ “ಮಾಂಕ್ ದಿ ಯಂಗ್” ಎಂದರು ನಟ ಸರೋವರ್.
ನಿರ್ಮಾಪಕರಾದ ಕರ್ನಲ್ ರಾಜೇಂದ್ರನ್, ಗೋಪಿಚಂದ್, ಲಾಲ್ ಚಂದ್ ಖತಾರ್ ಹಾಗೂ ವಿನಯ್ ಬಾಬು ರೆಡ್ಡಿ ಶೆಟ್ಟಿಹಳ್ಳ, ನಿರ್ದೇಶಕ ಮಾಸ್ಚಿತ್ ಸೂರ್ಯ ಮಾತನಾಡಿದರು.
ನಾಯಕಿ ಸೌಂದರ್ಯ ಗೌಡ, ಛಾಯಾಗ್ರಾಹಕ ಕಾರ್ತಿಕ್ ಶರ್ಮ, ಸಂಗೀತ ನಿರ್ದೇಶಕ ಸ್ವಾಮಿನಾಥನ್, ನಟ ಬಬ್ಲು ಪೃಥ್ವಿರಾಜ್, ಉಷಾ ಭಂಡಾರಿ, ನಟ ಪ್ರಣಯ್ ಮೂರ್ತಿ ಸೇರಿದಂತೆ ಹಲವರು ಈ ವೇಳೆ ಇದ್ದರು.