ಪತಿಯನ್ನು ಸಂಕಷ್ಟದಿಂದ ಪಾರು ಮಾಡುವಂತೆ ಕೊಲ್ಲೂರು ಮೂಕಾಂಬಿಕೆಯಲ್ಲಿ ಪ್ರಾರ್ಥಿಸಿರುವ ವಿಜಯಲಕ್ಷ್ಮೀ ದರ್ಶನ್ ಪ್ರಸಾದದೊಂದಿಗೆ ಜೈಲಿಗೆ ಭೇಟಿ ಕೊಟ್ಟಿದ್ದಾರೆ.
ದೇವಸ್ಥಾನದಿಂದ ನೇರವಾಗಿ ದರ್ಶನ್ (Darshan) ನೋಡಲು ಪತ್ನಿ ವಿಜಯಲಕ್ಷ್ಮಿ (Vijayalakshmi) ಜೈಲಿಗೆ ಭೇಟಿ ನೀಡಿದ್ದಾರೆ. ಅತ್ತಿಗೆ ಜೊತೆ ದಿನಕರ್ ತೂಗುದೀಪ್ (Dinakar Thoogudeepa) ಕೂಡ ಪರಪ್ಪನ ಅಗ್ರಹಾರಕ್ಕೆ ಬಂದಿದ್ದಾರೆ.
ದರ್ಶನ್ ಬಿಡುಗಡೆಗಾಗಿ ಪತ್ನಿ ವಿಜಯಲಕ್ಷ್ಮಿ ಕೊಲ್ಲೂರು ಮೂಕಾಂಬಿಕೆ ಸನ್ನಿಧಿಯಲ್ಲಿ ಚಂಡಿಕಾ ಯಾಗ ಮಾಡಿಸಿದ್ದರು. ಪೂಜೆಯ ಪ್ರಸಾದ ಸಮೇತ ದರ್ಶನ್ ಗೆ ನೀಡಲು ವಿಜಯಲಕ್ಷ್ಮಿ ಜೈಲಿಗೆ ಭೇಟಿ ಕೊಟ್ಟಿದ್ದಾರೆ. ಇನ್ನೂ ಅಣ್ಣನಿಗಾಗಿ ದಿನಕರ್, ಚಾಮುಂಡೇಶ್ವರಿ ದರ್ಶನ ಪಡೆದು ಬಂದಿದ್ದಾರೆ.
ಕೊಲೆ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ರನ್ನು ನೋಡಲು ಪತ್ನಿ ವಿಜಯಲಕ್ಷ್ಮಿ 6ನೇ ಬಾರಿ ಜೈಲಿಗೆ ಭೇಟಿ ನೀಡಿದ್ದಾರೆ. ವಾರದಲ್ಲಿ 2 ಬಾರಿ ಮಾತ್ರ ವಿಸಿಟ್ ಗೆ ಅವಕಾಶವಿರುತ್ತದೆ.