ಹುಬ್ಬಳ್ಳಿ: ಶಾಸಕರ ಕಚೇರಿಗೆ ಖದೀಮರು ಕನ್ನ ಹಾಕಿರುವ ಘಟನೆಯೊಂದು ನಡೆದಿದೆ.
ಹುಬ್ಬಳ್ಳಿಯಲ್ಲಿ ಶಾಸಕರ ಕಚೇರಿಗೆ ನುಗ್ಗಿರುವ ಖದೀಮರು ಕಳ್ಳತನ ಮಾಡಿದ್ದಾರೆ. ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ್ ಟೆಂಗಿನಕಾಯಿ ಕಚೇರಿಯಲ್ಲಿ ಕಳ್ಳತನ ಮಾಡಿದ್ದಾರೆ. ಕಚೇರಿಯ ಹಿಂದಿನ ಬಾಗಿಲಿನಿಂದ ಒಳನುಗ್ಗಿರುವ ಖದೀಮರು ಕಚೇರಿಯಲ್ಲಿದ್ದ ಎಲ್.ಇ.ಡಿ ಟಿವಿ ಕಳ್ಳತನ ಮಾಡಿದ್ದಾರೆ ಎನ್ನಲಾಗಿದೆ.
ಜೆಸಿ ನಗರದ ಟೌನ್ ಹಾಲ್ ಕಟ್ಟಡದ ಮೇಲೆ ಇರುವ ಶಾಸಕರ ಕಚೇರಿಯಲ್ಲೇ ಕಳ್ಳತನ ಮಾಡಿದ್ದಾರೆ. ಈ ಘಟನೆ ಭಾನುವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.