ಶಿವಮೊಗ್ಗ: ಕಾಶ್ಮೀರದಲ್ಲಿ ಶಿವಮೊಗ್ಗ ಮೂಲದ ಮಂಜುನಾಥ್ ಎಂಬುವವರು ಉಗ್ರರ ಗುಂಡಿಗೆ ಬಲಿಯಾಗಿರುವ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಹಿಂದೂಪರ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ರಾಮಣ್ಣ ಶೇಷ್ಠಿ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲಾಗಿದೆ. ಈ ವೇಳೆ ಪ್ರತಿಭಟನಾಕಾರರು ದೀಪ ಹಚ್ಚಿ ಶೋಕಾಚರಣೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಶಿವಮೊಗ್ಗ ಶಾಸಕ ಎಸ್.ಎನ್. ಚನ್ನಬಸಪ್ಪ ಭಾಗವಹಿಸಿ ಘಟನೆಯನ್ನು ಖಂಡಿಸಿದ್ದಾರೆ.
ಕಾಶ್ಮೀರದಲ್ಲಿ ಪ್ರವಾಸಕ್ಕೆ ತೆರಳಿದ್ದವರನ್ನು ಹತ್ಯೆ ಮಾಡಲಾಗಿದೆ. ಪ್ರವಾಸಿಗರು ಹಿಂದೂ ಎಂಬುವುದನ್ನು ಅರಿತು ಹತ್ಯೆ ಮಾಡಿದ್ದಾರೆ. ಮುಸ್ಲಿಂರೂ ದೇಶದಲ್ಲಿ ಇದ್ದಾರೆ. ಶಿವಮೊಗ್ಗದಲ್ಲೂ ಮುಸ್ಲಿಂರು ಇದ್ದಾರೆ ಎಂಬುವುದನ್ನು ಮರೆಯಬೇಡಿ ಎಂದು ಶಾಸಕ ಚನ್ನಬಸಪ್ಪ ಎಚ್ಚರಿಕೆ ನೀಡಿದ್ದಾರೆ.
ಕಾಶ್ಮೀರಕ್ಕೆ ಹೋದ ಹಿಂದೂಗಳನ್ನು ಹುಡುಕಿ ಹುಡುಕಿ ಹೊಡೆಯುತೀರಾ ಎಂದರೆ ಶಿವಮೊಗ್ಗದಲ್ಲಿ ಮುಸ್ಲಿಂರು ಇದ್ದಾರೆ ಎಂಬುವುದನ್ನು ನೆನಪಿನಲ್ಲಿಟ್ಟುಕೊಳ್ಳಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.