ಹುಬ್ಬಳ್ಳಿ : ನವೆಂಬರ್ನಲ್ಲಿ ಯಾವುದೇ ಕ್ರಾಂತಿ ನಡೆಯಲ್ಲ, 5 ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ ಎಂದು ಹುಬ್ಬಳ್ಳಿಯಲ್ಲಿ ವಸತಿ ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ.
ವರದಿಗಾರರೊಂದಿಗೆ ಮಾತನಾಡಿದ ಅವರು ಸದ್ಯಕ್ಕೆ ಸಿಎಂ ಕುರ್ಚಿ ಖಾಲಿ ಇಲ್ಲ, ಸಿಎಂ ಕುರ್ಚಿಯಲ್ಲಿ ಸಿದ್ದರಾಮಯ್ಯ ಇದ್ದಾರೆ. ಸಿದ್ದರಾಮಯ್ಯ ಬದಲಾಗುತ್ತಾರೆ ಎನ್ನುವುದು ಮಧ್ಯಮಗಳ ಸೃಷ್ಟಿ ಅಷ್ಟೇ, ಐದು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿತಾರೆ ಎಂದಿದ್ದಾರೆ.
ಸಿಎಂ ಆಗೋಕೆ ಎಲ್ಲರಿಗೂ ಆಸೆಯಿದೆ, ಅವಕಾಶ ಸಿಕ್ಕರೆ ನಾನೂ ಸಿಎಂ ಆಗುತ್ತೇನೆ ಆದರೆ ಇದೆಲ್ಲವೂ ಹೈಕಮಾಂಡ್ ನಿರ್ಧಾರದ ಮೇಲೆ ಅವಲಂಬಿತವಾಗಿರುತ್ತದೆ. ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧರಾಗಿದ್ದೇವೆ. ನವೆಂಬರ್ನಲ್ಲಿ ಸಂಪುಟ ಪುನರ್ರಚನೆಯಾಗುತ್ತೆ ಎನ್ನುವ ಮಾಹಿತಿ ಇದೆ. ಕೆಲ ಸಚಿವರನ್ನು ತೆಗೆದು ಹೊಸಬರಿಗೆ ಅವಕಾಶ ನೀಡಬಹುದು. ಹೈಕಮಾಂಡ್ ಇದನ್ನ ತೀರ್ಮಾನಿಸುತ್ತೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಸರ್ಕಾರದಲ್ಲಿ ಯಾವುದೇ ಆಂತರಿಕ ಕಲಹವಿಲ್ಲ. ಬದಲಿಗೆ ಬಿಜೆಪಿಯಲ್ಲಿ ಹಲವಾರು ಬಣಗಳಿದ್ದು, ಐದು ಗುಂಪುಗಳಿವೆ. ಬಿಜೆಪಿ ಯವರು ಮೊದಲು ತಮ್ಮ ಮನೆ ಸರಿ ಮಾಡಿಕೊಳ್ಳಲಿ,ಆರ್ ಎಸ್ ಎಸ್ ಬ್ಯಾನ್ ಮಾಡಬೇಕೆಂಬ ಡಿಮ್ಯಾಂಡ್ ವಿಚಾರ ನನ್ನ ಗಮನಕ್ಕಿಲ್ಲ ಅವರವರ ಸಂಘಟನೆ ಅವರು ಮಾಡಿಕೊಳ್ಳುತ್ತಾರೆ. ಅವರ ಬಗ್ಗೆ ನಾನು ತಲೆ ಕೆಡಿಸಿಕೊಳ್ಳಲ್ಲ ಎಂದು ಹೇಳಿಕೆ ನೀಡಿದ್ದಾರೆ.