ಬೆಂಗಳೂರು: ಡಿಕೆ ಸಾಹೇಬ್ರು ಹೇಳಿದ್ದೇ ಸರಿ. ಅವರು ಹೇಳಿದರಲ್ಲಿ ತಪ್ಪಿಲ್ಲ ಬಿಡಿ ಎಂದು ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧುಕೋಕಿಲ (Sadhu Kokila) ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಪರ ಬ್ಯಾಟ್ ಬೀಸಿದ್ದಾರೆ.
ಡಿಕೆಶಿ ನಟ್ಟು, ಬೋಲ್ಟು, ಟೈಟ್ ಹೇಳಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಎಲ್ಲರೂ ಬರಲಿ ಎಂಬ ಕಾರಣಕ್ಕೆ ಅವರು ಈ ರೀತಿಯ ಹೇಳಿಕೆ ನೀಡಿದ್ದಾರೆ. ಸಿನಿಮಾದವರನ್ನು ತಮ್ಮ ಮನೆಯವರು ಅಂದುಕೊಂಡಿದ್ದಾರೆ. ಅವರು ಚಿತ್ರರಂಗಕ್ಕೆ ದೂರದವರಲ್ಲ, ತುಂಬಾ ಹತ್ತಿರದವರು. ಸಿನಿಮಾದವರು ಅವರಿಗೆ ಆತ್ಮೀಯರು. ಅವರು ಹೇಳಿರುವುದು ದೊಡ್ಡ ವಿಷಯ ಆಗುವುದಿಲ್ಲ. ಹಲವರು ಇದನ್ನೇ ದೊಡ್ಡದು ಮಾಡುತ್ತಿದ್ದಾರೆ ಎಂದಿದ್ದಾರೆ.
ಬೆಂಗಳೂರು ಫಿಲ್ಮ್ಫೆಸ್ಟ್ಗೆ ಕೊನೆ ಕ್ಷಣದಲ್ಲಿ ಆಹ್ವಾನ ನೀಡಿದ ಆರೋಪ ವಿಚಾರವಾಗಿ, ಕಲಾವಿದರಿಗೆ ಕೊನೆಯ ಕ್ಷಣದಲ್ಲಿ ಆಮಂತ್ರಣ ಹೋಗಿಲ್ಲ. ಚಲನಚಿತ್ರೋತ್ಸವ ಜನವರಿ 6ಕ್ಕೆ ನಿರ್ಧಾರವಾಗಿದೆ. ಪಾಸ್ ಬಗ್ಗೆ ಕೇಳೋಕೆ ಆಗುತ್ತದೆ. ಉದ್ಘಾಟನೆ ಬಗ್ಗೆ ಗೊತ್ತಾಗುವುದಿಲ್ಲವಾ? ಬೇರೆಯವರ ಮೇಲೆ ಗೂಬೆ ಕೂರಿಸುವುದಲ್ಲ ಎಂದು ಕಿಡಿಕಾರಿದ್ದಾರೆ.