ಕೋಲಾರ: ಖದೀಮನೊಬ್ಬ ದೇಗುಲದಲ್ಲಿ ಕಳ್ಳತನ ಮಾಡಿ ಪರಾರಿಯಾಗುತ್ತಿದ್ದ ಸಂದರ್ಭದಲ್ಲಿ ಸಿಕ್ಕಿ ಬಿದ್ದಿರುವ ಘಟನೆ ನಡೆದಿದೆ.
ಕೋಲಾರ ತಾಲೂಕಿನ ನರಸಾಪುರ ಗ್ರಾಮದ ಬಳಿ ಈ ಘಟನೆ ನಡೆದಿದೆ. ನರಸಾಪುರ ಗ್ರಾಮದ ಹೊರವಲಯದ ಆಂಜನೇಯ ಸ್ವಾಮಿ ದೇಗುಲದಲ್ಲಿ ಈ ಘಟನೆ ನಡೆದಿದೆ. ದೇವರ ಪ್ರಭಾವಳಿ, ಕೈ ಅಚ್ಚು, ಕಿರೀಟ, ಪಾದವನ್ನು ಇಬ್ಬರು ಕಳ್ಳರು ಕಳ್ಳತನ ಮಾಡಿ ಪರಾರಿಯಾಗಲು ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಓಡುವಾಗ ಆಯತಪ್ಪಿ ಬಿದ್ದ ಕಳ್ಳನನ್ನು ಸ್ಥಳೀಯರು ಹಿಡಿದು ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ಕಳ್ಳನನ್ನು ವಶಕ್ಕೆ ಪಡೆದ ಪೊಲೀಸರು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.