ಮೈಸೂರು: ಆಪರೇಷನ್ ಸಿಂಧೂರ ಯಶಸ್ವಿ ಹಿನ್ನೆಲೆ, ಮೈಸೂರಿನಲ್ಲಿ ಭಾರತೀಯ ಯೋಧರಿಗೆ ಗೌರವ ಸಲ್ಲಿಸಲಾಯಿತು. ನಗರದಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ನೇತೃತ್ವದಲ್ಲಿ ತಿರಂಗಾ ಯಾತ್ರೆಯನ್ನು ನಡೆಸಲಾಯಿತು. ಮೈಸೂರಿನ ಜನರಲ್ ಕಾರ್ಯಪ್ಪ ವೃತ್ತದಿಂದ ತಿರಂಗಾ ಯಾತ್ರೆ ಆರಂಭಮಾಡಲಾಯಿತು. ಯಾತ್ರೆಯಲ್ಲಿ ಸುತ್ತೂರು ದೇಶೀಕೇಂದ್ರ ಶ್ರೀಗಳು, ಗಣಪತಿ ಸಚ್ಚಿದಾನಂದ ಶ್ರೀಗಳು ಆದಿ ಚುಂಚನಗಿರಿ ಶಾಖಾ ಮಠದ ಸೋಮನಾಥೇಶ್ವರ ಸ್ವಾಮೀಜಿ, ಸಾಸಕ ಶ್ರೀವತ್ಸ, ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿ ವಿವಿಧ ಧಾರ್ಮಿಕ ಮುಖಂಡರು ಭಾಗಿಯಾಗಿದ್ದರು.