ಬೆಂಗಳೂರು: ಇಂದು ಬಿಬಿಎಂಪಿಗೆ ಐತಿಹಾಸಿಕ ದಿನ ಎಂದೇ ಹೇಳಬಹುದು. ಏಕೆಂದರೆ ಇಂದು ಒಂದೇ ದಿನ ಬರೋಬ್ಬರಿ 12,692 ಪೌರ ಕಾರ್ಮಿಕರಿಗೆ ನೌಕರಿಯ ಭಾಗ್ಯ ಸಿಕ್ಕಿದೆ.
ನೇರ ನೇಮಕಾತಿ ಅಡಿಯಲ್ಲಿ 12,692 ಪೌರಕಾರ್ಮಿಕರ ಸೇವೆಗೆ ಭದ್ರತೆ ಒದಗಿಸುವ ಮೂಲಕ ರಾಜ್ಯ ಸರ್ಕಾರ ಇತಿಹಾಸ ಸೃಷ್ಟಿಸಿದೆ. ಹೀಗಾಗಿ ಇಂದು 12,692 ಪೌರಕಾರ್ಮಿಕರಿಗೆ ನೇಮಕಾತಿ ಅದೇಶ ಪತ್ರಗಳನ್ನು ಡಿಸಿಎಂ ಡಿಕೆ ಶಿವಕುಮಾರ್ ಅವರಿಂದ ನೇಮಕಾತಿ ಆದೇಶ ಪತ್ರ ವಿತರಿಸಲಾಗುತ್ತದೆ.
ಇಷ್ಟು ದಿನ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿದ ಪೌರ ಕಾರ್ಮಿಕರಿಗೆ ರಾಜ್ಯ ಸರ್ಕಾರ ಖಾಯಾಂತಿ ಭಾಗ್ಯ ಕರುಣಿಸಿದೆ. ಕಾಂಗ್ರೇಸ್ ಪಕ್ಷ ಚುನಾವಣೆ ವೇಳೆ ಪೌರಕಾರ್ಮಿಕರನ್ನು ನೇರ ನೇಮಕಾತಿ ಮಾಡಿಕೊಳ್ಳುವುದಾಗಿ ಭರವಸೆ ನೀಡಿತ್ತು. ಈಗ ನುಡಿದಂತೆ ಪೌರ ಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಿಸಲಾಗುತ್ತಿದೆ. ನಗರದ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸಿ ಅದೇಶ ಪತ್ರ ವಿತರಣೆ ಮಾಡಲಾಗುತ್ತಿದೆ. ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸೇರಿದಂತೆ ಹಲವು ಸಚಿವರು ಭಾಗವಹಿಸಲಿದ್ದಾರೆ.