ಚಿಕ್ಕಮಗಳೂರು : ಬಯಲುಸೀಮೆ ಭಾಗದಲ್ಲಿ ಭಾರೀ ಬಿರುಗಾಳಿ ಅಬ್ಬರದಿಂದ ಶಾಲೆಯ ಮೇಲ್ಚಾವಣಿ ಕಿತ್ತುಹಾಕಿ ಅವಾಂತರ ಸೃಷ್ಟಿಸಿರುವ ಘಟನೆ ಚಿಕ್ಕಮಗಳೂರಿನ ಬೆಳವಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಸುರುಳಿ ಆಕಾರದಲ್ಲಿ ಬೀಸಿದ ಬಾರಿ ಬಿರುಗಾಳಿಗೆ ಶಾಲೆಯ ಮೇಲ್ಚಾವಣಿ ಹೆಂಚುಗಳು ಚಲ್ಲಾಪಿಲ್ಲಿಯಾಗಿದೆ. ಮಧ್ಯಾಹ್ನದ ಬಿಸಿಯೂಟ ಮುಗಿಸಿ ವಿದ್ಯಾರ್ಥಿಗಳು ಹೊರಬಂದ ಕೆಲವೇ ಕ್ಷಣಗಳಲ್ಲೇ ಈ ದುರಂತ ಸಂಭವಿಸಿದ್ದು, ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿ, ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಶಾಲೆಯಲ್ಲಿ ನಾಲ್ಕು ಲಕ್ಷಕ್ಕೂ ಹೆಚ್ಚು ಪ್ರಮಾಣದ ಹಾನಿ ಉಂಟಾಗಿದ್ದು, ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
ಇದನ್ನೂ ಓದಿ : ಪಾಕ್ ವಿರುದ್ಧದ ಹೈವೋಲ್ಟೇಜ್ ಕದನ | ಟೀಮ್ ಇಂಡಿಯಾದಲ್ಲಿ 3 ಮಹತ್ವದ ಬದಲಾವಣೆ ಸಾಧ್ಯತೆ



















