ಮಂಡ್ಯ: ಆದಿಚುಂಚನಗಿರಿ (Adichunchanagiri) ಮಠಕ್ಕೆ ತೆರಳುತ್ತಿದ್ದ ಪ್ರವಾಸಿಗರ ಕಾರಿಗೆ (Car) ಬೆಂಕಿ ಹೊತ್ತಿಕೊಂಡಿರುವ ಘಟನೆ ನಡೆದಿದೆ.
ಈ ಘಟನೆ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಹತ್ತಿರ ನಡೆದಿದೆ. ಬೆಂಗಳೂರಿನ (Bengaluru) ಕುಟುಂಬವೊಂದು ಆದಿಚುಂಚನಗಿರಿಗೆ ಕಾರಿನಲ್ಲಿ ಹೊರಟಿತ್ತು. ಕಾರನ್ನು ಮಹಿಳೆ ಚಲಾಯಿಸುತ್ತಿದ್ದರು. ಕಾರು ಆದಿಚುಂಚನಗಿರಿ ಹತ್ತಿರ ಬಂದಿದ್ದ ವೇಳೆ ಇದ್ದಕ್ಕಿದ್ದಂತೆ ಬೆಂಕಿ ಆವರಿಸಿದೆ.
ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದ ಮಹಿಳೆ, ಹಾಗೂ ಆಕೆಯ ಪತಿ ಮಗುವನ್ನು ಕರೆದುಕೊಂಡು ಕಾರಿನಿಂದ ಇಳಿದಿದ್ದಾರೆ. ಹೀಗಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.