ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ (Chinnaswamy Stadium Stampede) ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಐವರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದೆ. ಸದ್ಯ ಐಪಿಎಸ್ ಅಧಿಕಾರಿಗಳು ಸೇರಿದಂತೆ ಐವರು ಸಸ್ಪೆಂಡ್ ಅಧಿಕಾರಿಗಳ ರಿಪೋರ್ಟ್ ಸಿದ್ಧವಾಗಿದೆ. ಕೇಂದ್ರ ಸರ್ಕಾರಕ್ಕೆ ಈ ವರದಿ ಸಲ್ಲಿಕೆಯಾಗುವ ಸಾಧ್ಯತೆ ಇದೆ.
ಯುಪಿಎಸ್ಸಿ ನಿಯಾಮವಳಿಗಳಂತೆ ಐಪಿಎಸ್ ಅಧಿಕಾರಿಗಳನ್ನು ಅಮಾನತು ಮಾಡಿದ 15 ದಿನಗಳ ಒಳಗಾಗಿ ವರದಿ ಸಲ್ಲಿಸಬೇಕು. ಈಗಾಗಲೇ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಆದರೆ, ಲಿಖಿತ ವರದಿ ಸಲ್ಲಿಸಿಲ್ಲ. ಈ ಹಿನ್ನೆಲೆಯಲ್ಲಿ ವರದಿ ಸಲ್ಲಿಕೆಯಾಗುವ ಸಾಧ್ಯತೆ ಇದೆ.
ಐಪಿಎಸ್ ಅಧಿಕಾರಿಗಳಾದ ಬಿ. ದಯಾನಂದ್, ಶೇಖರ್, ವಿಕಾಸ್ ಕುಮಾರ್ ಅಮಾನತು ಆಗಿದ್ದರು. ವರದಿಯಲ್ಲಿ ಪೊಲೀಸರ ಲೋಪದ ಬಗ್ಗೆ ಸರ್ಕಾರ ಆರೋಪ ಮಾಡಿದೆ ಎನ್ನಲಾಗಿದೆ. ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣದ ಹೊಣೆ ಪೊಲೀಸರದ್ದಾಗಿದ್ದು, ಐಪಿಎಸ್ ಅಧಿಕಾರಿಗಳ ಮೇಲೆ ಕರ್ತವ್ಯ ಲೋಪ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಆದರೆ, ಕೇಂದ್ರ ಸರ್ಕಾರ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುವುದನ್ನು ಕಾಯ್ದು ನೋಡಬೇಕಿದೆ.