ಬೆಂಗಳೂರು: ರಾಜ್ಯ ಸರ್ಕಾರವು (Karataka Government) ಆಡಳಿತಯಂತ್ರದಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದ್ದು, ಐಎಎಸ್ ಅಧಿಕಾರಿಗಳ ವರ್ಗಾವಣೆ(IAS Transfer) ಮಾಡಿದೆ. ಅಲ್ಲದೇ, ಹಲವು ಅಧಿಕಾರಿಗಳಿಗೆ ಹೆಚ್ಚುವರಿ ಹುದ್ದೆ ನೀಡಲಾಗಿದೆ.ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯಪಾಲರ ಆದೇಶಾನುಸಾರ ಸರ್ಕಾರದ ಅಧೀನ ಕಾರ್ಯದರ್ಶಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಧಿಕಾರಿ ಟಿ. ಮಹಾಂತೇಶ್ ಆದೇಶ ಹೊರಡಿಸಿದ್ದಾರೆ.
ಮೇಜರ್ ಮಣಿವಣ್ಣನ್ ಪಿ. (ಕೆಎನ್: 1988). ಸರ್ಕಾರದ ಪ್ರಧಾನ ಕಾರ್ಯದರ್ಶಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು. ಇವರನ್ನು ಈ ಹುದ್ದೆಯ ಜೊತೆಗೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಸಹಕಾರ ಇಲಾಖೆ, ಬೆಂಗಳೂರು ಹುದ್ದೆಗೆ ನೇಮಕ ಮಾಡಲಾಗಿದೆ. ಈ ಹುದ್ದೆಯಲ್ಲಿದ್ದ ಡಾ. ಅಜಯ್ ನಾಗಭೂಷಣ್ ಎಂ. ಎನ್. ಅವರನ್ನು ಬಿಡುಗಡೆ ಮಾಡಲಾಗಿದೆ.
ವಿ. ಅನ್ಬು ಕುಮಾರ್ (ಕೆಎನ್: 2004) ವ್ಯವಸ್ಥಾಪಕ ನಿರ್ದೇಶಕರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಬೆಂಗಳೂರು. ಈ ಹುದ್ದೆಯ ಜೊತೆಗೆ ಪಶುಸಂಗೋಪನೆ, ಪಶು ವೈದ್ಯಕೀಯ ವಿಜ್ಞಾನ ಹಾಗೂ ಮೀನುಗಾರಿಕೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಹೊಣೆ ನೀಡಲಾಗಿದೆ. ಈ ಹುದ್ದೆಯಲ್ಲಿದ್ದ ಡಾ. ಅಜಯ್ ನಾಗಭೂಷಣ್ ಎಂ. ಎನ್. ಅವರನ್ನು ಬಿಡುಗಡೆಗೊಳಿಸಲಾಗಿದೆ.
ಮನೋಜ್ ಜೈನ್ (ಕೆಎನ್: 2006) ಸರ್ಕಾರದ ಕಾರ್ಯದರ್ಶಿ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು. ಅಲ್ಲದೇ, ಮುಂದಿನ ಆದೇಶದ ತನಕ ಸರ್ಕಾರದ ಕಾರ್ಯದರ್ಶಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ನೇಮಕ ಮತ್ತು ಯೋಜನೆ ಕಾರ್ಯಕ್ರಮ ನಿರ್ವಹಣೆ ಹಾಗೂ ಸಾಂಖ್ಯಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಹೊಣೆ ನೀಡಲಾಗಿದೆ.
ಸಲ್ಮಾ ಕೆ. ಫಹೀಮ್ (ಕೆಎನ್: 2006) ಸರ್ಕಾರದ ಕಾರ್ಯದರ್ಶಿ ಪ್ರವಾಸೋದ್ಯಮ ಇಲಾಖೆ, ಬೆಂಗಳೂರು. ಈ ಹುದ್ದೆಯ ಜೊತೆಗೆ ಸರ್ಕಾರದ ಕಾರ್ಯದರ್ಶಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ. ಸಿ. ಶಿಖಾ ಅವರ ನಂತರ ಕರ್ನಾಟಕದ ಮತ್ತೋರ್ವ ಐಎಎಸ್ ಅಧಿಕಾರಿ ಕೇಂದ್ರ ಸೇವೆಗೆ ನಿಯೋಜನೆಗೊಂಡಿದ್ದಾರೆ. ರಾಜ್ಯ ಸರ್ಕಾರದ ಕಾರ್ಯಗಳಿಂದ ಬಿಡುಗಡೆಗೊಳಿಸಿ ಕರ್ನಾಟಕ ಸರ್ಕಾರ ಆದೇಶವನ್ನು ಹೊರಡಿಸಿದೆ.
ಡಾ. ಅಜಯ್ ನಾಗಭೂಷಣ್ ಎಂ. ಎನ್. (ಕೆಎನ್: 2004) ಅವರು ಜಂಟಿ ಕಾರ್ಯದರ್ಶಿ ಭಾರತ ಸರ್ಕಾರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹುದ್ದೆಗೆ ನೇಮಕಗೊಂಡಿದ್ದಾರೆ. ಫೆಬ್ರವರಿ 1ರಂದು ಈ ಕುರಿತು ಆದೇಶವನ್ನು ಹೊರಡಿಸಲಾಗಿದೆ.