ಗದಗ: ರಾಜ್ಯದಲ್ಲಿ ಸತತವಾಗಿ ಭಾರಿ ಪ್ರಮಾಣದ ಮಳೆಯಾಗುತ್ತಿರುವ ಹಿನ್ನೆಲೆ ಈಗಾಗಲೇ ಸಾಕಷ್ಟು ಮರಬಿದ್ದು ವಾಹನ ಸವಾರರು ಪರದಾಡಿದ್ದಾರೆ. ಇದೀಗ ಗದಗದಲ್ಲಿ ನೆನ್ನೆ ಸುರಿದ ಗಾಳಿ ಸಹಿತ ಮಳೆಗೆ ಅರಳಿ ಮರ ಉರುಳಿ ಬಿದ್ದಿದೆ.
ಮರ ಬಿದ್ದ ಕಾರಣ ಗದಗದ ಖಾನತೋಟದಲ್ಲಿ ವಿದ್ಯುತ್ ಸಂಪರ್ಕ ಕಡಿತವಾಗಿದ್ದು, ನಗರಸಭೆ ಹಾಗೂ ಹೆಸ್ಕಾಂ ಸಿಬ್ಬಂದಿ ಕೂಡಲೇ ಮರ ತೆರವು ಮಾಡಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.