ಬೆಂಗಳೂರು: ಇಂದು ರಾಜ್ಯಾದ್ಯಂತ ಮಧ್ಯರಾತ್ರಿಯಿಂದಲೇ ಲಾರಿ ಮುಷ್ಕರಕ್ಕೆ ರಾಜ್ಯ ಲಾರಿ ಮಾಲೀಕರ ಸಂಘ (Lorry Owners assosiation) ಕರೆ ನೀಡಿದ್ದು, ಮುಷ್ಕರ ನಡೆಯುತ್ತಿದೆ.
ಡೀಸೆಲ್, ಪೆಟ್ರೋಲ್ ದರ ಡಿಸೆಲ್ ದರ ಏರಿಕೆ Diesel Price), ಟೋಲ್ ಶುಲ್ಕ ಹೆಚ್ಚಳ, ಆರ್ಟಿಒ ಅಧಿಕಾರಿಗಳ ಕಿರುಕುಳ ಸೇರಿದಂತೆ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಬೇಡಿಕೆ ಈಡೇರಿಕೆಗಾಗಿ ಲಾರಿ ಮಾಲೀಕರು ಮುಷ್ಕರ ಕೈಗೊಂಡಿದ್ದಾರೆ.
ಈ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ (Lorry Strike) ಹಲವು ಸಂಘಟನೆಗಳು ಕೂಡ ಸಾಥ್ ನೀಡಿವೆ. ರಾಜ್ಯದಲ್ಲಿ ಸುಮಾರು 6 ಲಕ್ಷಕ್ಕೂ ಅಧಿಕ ಲಾರಿಗಳು ರಸ್ತೆಗೆ ಇಳಿಯದೆ ನಿಂತಿವೆ. ಹೀಗಾಗಿ ಹಲವು ಕ್ಷೇತ್ರಗಳಿಗೆ ಹೆಚ್ಚಿನ ತೊಂದರೆಯಾಗುವ ಸಾಧ್ಯತೆ ಇದೆ. ಡೀಸೆಲ್ ಹಾಗೂ ಪೆಟ್ರೋಲ್ ಇಳಿಸಬೇಕೆಂದು ಏ. 14ರ ವರೆಗೆ ಲಾರಿ ಮಾಲೀಕರು ಗಡುವು ನೀಡಿದ್ದರು. ಆದರೆ, ಸರ್ಕಾರ ಇದಕ್ಕೆ ಸ್ಪಂದಿಸಿಲ್ಲ. ಹೀಗಾಗಿ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದಾರೆ. ಹೀಗಾಗಿ ಅನೇಕ ಕ್ಷೇತ್ರಗಳಿಗೆ ತೊಂದರೆಯಾಗುವ ಸಾಧ್ಯತೆ ಇದೆ.