ಬೈಂದೂರು : ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಹಾಗೂ ಆಧುನಿಕ ಶಿಕ್ಷಣವನ್ನು ಒದಗಿಸುವ ಉದ್ದೇಶದಿಂದ ಯು.ಬಿ. ಶೆಟ್ಟಿ ಶಿಕ್ಷಣ ಸಂಸ್ಥೆಯಲ್ಲಿ ಅತ್ಯಾಧುನಿಕ ಕಂಪ್ಯೂಟರ್ ಲ್ಯಾಬ್, ಸೈನ್ಸ್ ಲ್ಯಾಬ್ ಹಾಗೂ ಸುಸಜ್ಜಿತ ಗ್ರಂಥಾಲಯವನ್ನು ಉದ್ಘಾಟಿಸಲಾಯಿತು.

ಯು.ಬಿ. ಶೆಟ್ಟಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಯು.ಬಿ. ಶೆಟ್ಟಿ ಅವರು ನೂತನ ಸೌಲಭ್ಯಗಳನ್ನು ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೂ ನಗರ ಪ್ರದೇಶದ ಮಕ್ಕಳಿಗೆ ದೊರೆಯುವ ಎಲ್ಲಾ ಶೈಕ್ಷಣಿಕ ಸೌಲಭ್ಯಗಳು ಲಭ್ಯವಾಗಬೇಕು ಎಂಬ ಉದ್ದೇಶದಿಂದ ಸಂಸ್ಥೆಯಲ್ಲಿ ಆಧುನಿಕ ಪ್ರಯೋಗಾಲಯಗಳು ಹಾಗೂ ಗ್ರಂಥಾಲಯವನ್ನು ನಿರ್ಮಿಸಲಾಗಿದೆ. ವಿದ್ಯಾರ್ಥಿಗಳು ತಂತ್ರಜ್ಞಾನ ಮತ್ತು ವಿಜ್ಞಾನ ಕ್ಷೇತ್ರದಲ್ಲಿ ಉತ್ತಮ ಜ್ಞಾನವನ್ನು ಪಡೆದು ಉನ್ನತ ಶಿಕ್ಷಣದತ್ತ ಸಾಗಲು ಈ ಸೌಲಭ್ಯಗಳು ಸಹಕಾರಿಯಾಗಲಿವೆ ಎಂದು ಹೇಳಿದರು.

ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಅನುಕೂಲತೆಯನ್ನು ಗಮನದಲ್ಲಿಟ್ಟುಕೊಂಡು, ವಿಶೇಷವಾಗಿ ಪುಟ್ಟ ಮಕ್ಕಳಿಗೆ ಶೌಚಾಲಯಕ್ಕೆ ಸುರಕ್ಷಿತವಾಗಿ ಹಾಗೂ ಸುಲಭವಾಗಿ ತೆರಳಲು ಏರೋ ಬ್ರಿಜ್ ಮಾದರಿಯ ಸಂಪರ್ಕ ವ್ಯವಸ್ಥೆಯನ್ನು ಸಹ ಕಲ್ಪಿಸಲಾಗಿದೆ. ಎಲ್ಕೆಜಿ (LKG)ಯಿಂದ ಪದವೀಧರ ಶಿಕ್ಷಣದವರೆಗೆ ಒಂದೇ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ಶಿಕ್ಷಣವನ್ನು ಒದಗಿಸುವ ಮಹತ್ತರ ಕನಸಿನೊಂದಿಗೆ ಸಂಸ್ಥೆ ದೃಢ ಹೆಜ್ಜೆ ಇಡುತ್ತಿದೆ ಎಂದುರು.

ಈ ಸಂದರ್ಭದಲ್ಲಿ ಯು.ಬಿ. ಶೆಟ್ಟಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಯಶಶ್ರೀ ಬಿ. ಶೆಟ್ಟಿ, ಪ್ರಾಂಶುಪಾಲೆ ಅಮಿತಾ ಶೆಟ್ಟಿ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
ಇದನ್ನೂ ಓದಿ : ರಾಜ್ಯದಲ್ಲಿ ಇಂದು ಭಾರೀ ಮಳೆ ಎಚ್ಚರಿಕೆ ; 11 ಜಿಲ್ಲೆಗಳಿಗೆ ಆರೆಂಜ್, 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!


















