ಮಣಿಪಾಲ/ಉಡುಪಿ : ಪ್ರಗತಿನಗರ ಕೇಂದ್ರ ವಿದ್ಯಾಲಯಕ್ಕೆ ವಿದ್ಯಾರ್ಥಿಗಳನ್ನು ಸಾಗಿಸುತ್ತಿದ್ದ ಟಿ.ಟಿ ವಾಹನದ ಚಾಲಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಇಂದು(ಶುಕ್ರವಾರ) ಬೆಳಗ್ಗೆ ನಡೆದಿದೆ.
ವಿದ್ಯಾರ್ಥಿಗಳನ್ನು ಶಾಲೆಗೆ ಸಾಗಿಸುತ್ತಿರುವಾಗ ಚಾಲಕನಿಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದೆ. ಮಾರುಥಿ ವೀಥಿಕಾದಲ್ಲಿ ನಡೆದು ಹೋಗುತ್ತಿದ್ದ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರನ್ನು ಕಂಡು, ವಾಹನ ನಿಲ್ಲಿಸಿದ ಚಾಲಕ, ಎದೆನೋವಿನ ವಿಚಾರವನ್ನು ಒಳಕಾಡುವವರಲ್ಲಿ ಹೇಳಿಕೊಂಡಿದ್ದಾನೆ. ತಕ್ಷಣ ಒಳಕಾಡು ಅಂಉಲೆನ್ಸ್ ವಾಹನದಲ್ಲಿ ಚಾಲಕನನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು. ಪರೀಕ್ಷಿಸಿದ ವೈದ್ಯರಿಂದ ಚಾಲಕ ಮೃತಪಟ್ಟಿರುವುದು ತಿಳಿದುಬಂದಿದೆ.
ಮೃತ ಚಾಲಕನನ್ನು ಕಾರ್ಕಳ ನೀರೆ ಬೈಲೂರಿನ ಮೊಯ್ದಿನ್ ಬಾವ(65) ಎಂದು ತಿಳಿದು ಬಂದಿದೆ.
ಶಾಲಾವಾಹನ ಚಲನೆಯಲ್ಲಿರುವಾಗಲೇ ಚಾಲಕ ಮೃತಪಟ್ಟಿದ್ದಲ್ಲಿ ಭಾರಿ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.