ಈ ವಾರ ರಕ್ಷಿತಾ ಶೆಟ್ಟಿ ಅವರು ಹೈಲೈಟ್ ಆಗಿದ್ದಾರೆ. ನಾಮಿನೇಶನ್ ಪ್ರಕ್ರಿಯೆಯಲ್ಲಿಯೂ ಅತಿರೇಕದ ವರ್ತನೆ ತೋರಿದ್ದಾರೆ ಎಂಬುದು ವೀಕ್ಷಕರ ಅಭಿಪ್ರಾಯವೂ ಹೌದು. ಈ ವಾರ ಕಾವ್ಯ ಅವರನ್ನು ನಾಮಿನೇಟ್ ಮಾಡುವಾಗ, ರಕ್ಷಿತಾ ಶೆಟ್ಟಿ ಹೈಡ್ರಾಮಾ ಸೃಷ್ಟಿಸಿದರು. ಈ ಬಗ್ಗೆ ಮನೆಯಲ್ಲಿ ಚರ್ಚೆಗಳೂ ನಡೆದಿತ್ತು.
ಬಿಗ್ ಬಾಸ್ ಕೊಟ್ಟ ಟಾಸ್ಕ್ನಲ್ಲಿ ರಕ್ಷಿತಾ ಶೆಟ್ಟಿ ಅವರು ಈ ವಾರ ಉತ್ತಮ ಕಾರಣ ನೀಡಿ ನಾಮಿನೇಷನ್ ಮಾಡಿಲ್ಲ ಎಂದು ಮನೆಮಂದಿಯಲ್ಲ ಆರೋಪ ಮಾಡಿದ್ದಾರೆ. ಗಿಲ್ಲಿ ಹಾಗೂ ಕಾವ್ಯಾ ಅವರನ್ನು ನಾಮಿನೇಟ್ ಮಾಡುವಾಗ ಅವರು ತೆಗೆದುಕೊಂಡ ಕಾರಣ ಸಿಲ್ಲಿ ಆಗಿತ್ತು. ಇದೇ ಕಾರಣ ನೀಡಿ ರಕ್ಷಿತಾಗೆ ಸರಿಯಾಗಿ ನಿರ್ಧಾರ ತೆಗೆದುಕೊಳ್ಳೋಕೆ ಬರೋದಿಲ್ಲ ಎಂದು ಮನೆಯ ಅನೇಕರು ಹೇಳಿದ್ದಾರೆ.
ಸ್ಪಂದನಾ ಅವರು `ನನ್ನನ್ನು ನಾಮಿನೇಟ್ ಮಾಡುವಾಗ ಕೊಟ್ಟ ಕಾರಣ, ಯಾವದೂ ಅರ್ಥವೇ ಇರಲಿಲ್ಲ’ ಎಂದಿದ್ದಾರೆ. ಅಭಿಷೇಕ್ ಕೂಡ, `ರಕ್ಷಿತಾ ಅವರು ಪ್ಯಾನಿಕ್ ಆಗಿ ಯಾವುದು ತಲೆಗೆ ಬರುತ್ತೋ ಅದನ್ನ ಕಾರಣಗಳನ್ನು ಕೊಡೋದು ಅಲ್ಲ’ ಎಂದಿದ್ದಾರೆ. ಇನ್ನು ರಕ್ಷಿತಾ ಈ ಬಗ್ಗೆ ಪ್ರತಿಕ್ರಿಯಿಸಿ, `ನನಗೆ ಯಾವಾಗ ಏನು ನಿರ್ಧಾರ ತೆಗೆದುಕೊಂಡು ಹೇಳಬೇಕೋ ಅದನ್ನ ಆ ಕ್ಷಣಕ್ಕೆ ಯೋಚನೆ ಮಾಡಿಯೇ ಹೇಳುತ್ತೇನೆ’ ಎಂದಿದ್ದಾರೆ. ಕಾವ್ಯ ಮಾತನಾಡಿ, `ಚಿಕ್ಕ ಹುಡುಗಿ ನಿರ್ಧಾರ ತೆಗೆದುಕೊಳ್ಳಲು ಆಗ್ತಾ ಇಲ್ವಾ ಅಂತ ಹೇಳೋದಾ? ಅಥವಾ ಸ್ಮಾರ್ಟೋ?’ ಅಂತ ಹೇಳಿದ್ದಾರೆ.
ಇದನ್ನೂ ಓದಿ : ಗಬ್ಬಾದಲ್ಲಿ ಜೋ ರೂಟ್ ಶತಕದ ಆರ್ಭಟ : ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ನಲ್ಲಿ ಹೊಸ ಇತಿಹಾಸ



















