ನವದೆಹಲಿ: ಹೈಸ್ಪೀಡ್ ರೈಲ್ವೆ ಕಾರಿಡಾರ್ ಘೋಷಣೆ ಮಾಡಿದೆ. ದೇಶದ ಪ್ರಮುಖ ಏಳು ನಗರಗಳಲ್ಲಿ ಹೈಸ್ಪೀಡ್ ರೈಲುಗಳ ಸಂಚಾರಕ್ಕೆ ಸಕಲ ಸೌಕರ್ಯ ಒದಗಿಸಲಾಗುತ್ತದೆ. ಅದರಲ್ಲೂ ಪ್ರಮುಖವಾಗಿ, ಹೈದರಾಬಾದ್ ನಿಂದ ಬೆಂಗಳೂರು (Union Budget 2026) ಮಧ್ಯೆ ಹೈಸ್ಪೀಡ್ ರೈಲು ಸಂಚಾರ ನಡೆಸಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Union Budget 2026) ತಿಳಿಸಿದರು.
ದೆಹಲಿ-ವಾರಾಣಸಿ, ಪುಣೆ-ಹೈದರಾಬಾದ್, ಹೈದರಾಬಾದ್-ಚೆನ್ನೈ ಸೇರಿ ಏಳು ನಗರಗಳಲ್ಲಿ ಹೈಸ್ಪೀಡ್ ರೈಲು ಯೋಜನೆ ಆರಂಭಿಸಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಇದರೊಂದಿಗೆ ಏಳು ನಗರಗಳಿಗೆ ಸಂಪರ್ಕ ಕಲ್ಪಿಸುವುದು ಕೇಂದ್ರ ಸರ್ಕಾರದ ಗುರಿಯಾಗಿದೆ. ಇದರ ಜತೆಗೆ ವಾರಾಣಸಿ ಹಾಗೂ ಪಟನಾದಲ್ಲಿ ಹಡಗು ದುರಸ್ತಿ ಕೇಂದ್ರಗಳ ಸ್ಥಾಪನೆ. ಅತಿ ಸಣ್ಣ, ಸಣ್ಣ ಹಾಗೂ ಮಧ್ಯಮ ಶ್ರೇಣಿ ಉದ್ಯಮಗಳಿಗೆ 10 ಸಾವಿರ ಕೋಟಿ ರೂ. ಮೀಸಲಿಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು.
ಸೆಮಿಕಂಡಕ್ಟರ್ ಮಿಷನ್ ಘೋಷಣೆ
ಕೇಂದ್ರ ಸರ್ಕಾರವು ಸೆಮಿ ಕಂಡಕ್ಟರ್ 2.0 ಘೋಷಣೆ ಮಾಡಿದೆ. ಇದಕ್ಕಾಗಿ 40 ಸಾವಿರ ಕೋಟಿ ರೂಪಾಯಿ ಮೀಸಲಿಡುವುದಾಗಿ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ದೇಶದಲ್ಲಿಯೇ ಸೆಮಿಕಂಡಕ್ಟರ್ ಗಳನ್ನು ಉತ್ಪಾದಿಸಲು ಕೇಂದ್ರ ಸರ್ಕಾರ ಪ್ರಮುಖ ಘೋಷಣೆ ಮಾಡಿದೆ. ಅಲ್ಲದೆ, ಸಮರ್ಥ್ 2.0 ಯೋಜನೆ ಮೂಲಕ ಬೃಹತ್ ಟೆಕ್ಸ್ ಟೈಲ್ ಪಾರ್ಕ್ ನಿರ್ಮಿಸಲಾಗುತ್ತದೆ. ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ ಮೂಲಕ ಖಾದಿ, ಗ್ರಾಮೋದ್ಯೋಗಕ್ಕೂ ಪ್ರಾಮುಖ್ಯತೆ ನೀಡಲಾಗುತ್ತದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು.
ಪ್ರಮುಖ ಘೋಷಣೆಗಳು
ಆತ್ಮನಿರ್ಭರ ಭಾರತ ಅಭಿಯಾನಕ್ಕಾಗಿ 2 ಸಾವಿರ ಕೋಟಿ ರೂಪಾಯಿ
ಭವಿಷ್ಯದ ಚಾಂಪಿಯನ್ ಗಳಿಗಾಗಿ 10 ಸಾವಿರ ಕೋಟಿ ರೂಪಾಯಿ ಅನುದಾನ
ಸಣ್ಣ ಹಾಗೂ ಮಧ್ಯಮ ಶ್ರೇಣಿ ಉದ್ಯಮಗಳಿಗೆ ಸಾಲದ ನೆರವು
ಇದನ್ನೂ ಓದಿ: Union Budget 2026 | ತಮಿಳುನಾಡು, ಆಂಧ್ರ, ಕೇರಳಕ್ಕೆ ಬಂಪರ್: ಮಿನರಲ್ ಕಾರಿಡಾರ್ ಘೋಷಿಸಿದ ಕೇಂದ್ರ



















