ಬೆಂಗಳೂರು: ಬೆಂಗಳೂರಿನಲ್ಲಿ ನಿನ್ನೆ ಏಕಾಏಕಿ ಸುರಿದ ಮಳೆಯಿಂದಾಗಿ ನಾನಾ ಅವಾಂತರಗಳಾಗಿವೆ. ವಸಂತನಗರ ವಾರ್ಡ್ ಮಾಧವನಗರದಲ್ಲಿ ಬೃಹತ್ ಗಾತ್ರದ ಮರವೊಂದು ಬುಡ ಸಮೇತ ಮನೆ ಮೇಲೆ ವಾಲಿದೆ. ಅಂಡರ್ ಗ್ರೌಂಡ್ ಕೇಬಲ್ ಕಾಮಗಾರಿ ನಡೆಸುತ್ತಿರುವ ಪರಿಣಾಮ ಬೃಹತ್ ಗಾತ್ರದ ಮರ ಮನೆಯ ಮೇಲೆ ವಾಲಿದ್ದು, ಮನೆಯ ಗ್ಲಾಸ್ ಗಳು ಪೀಸ್ ಪೀಸ್ ಆಗಿವೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.

ಇಂದಿರಾ ನಗರದ ಹೆಚ್ ಕಾಲೋನಿಯಲ್ಲಿ ದಿಢೀರ್ ಮಳೆಯಿಂದಾಗಿ ಕಾರಿನ ಮೇಲೆ ಬೃಹತ್ ಮರದ ಕೊಂಬೆ ಬಿದ್ದಿದೆ. ಸದ್ಯ ಕಾರಿನಲ್ಲಿ ಯಾರಿಲ್ಲದ ಕಾರಣ ಅನಾಹುತ ಒಂದು ತಪ್ಪಿದಂತಾಗಿದೆ.

ಕೆ.ಆರ್ ಪುರಂ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಹೂಡಿ ಬ್ರಿಡ್ಜ್ ರೈಲ್ವೆ ಅಂಡರ್ಪಾಸ್ನಲ್ಲಿ ಮಳೆ ನೀರು ನಿಂತು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಅಯ್ಯಪ್ಪನಗರ ಕಡೆಯಿಂದ ಹೂಡಿ ಕಡೆಗೆ ನಿಧಾನಗತಿಯ ವಾಹನ ಸಂಚಾರವಿತ್ತು.
