ಅರ್ಬನ್ ಸೌಹಾರ್ದ ಸಹಕಾರಿ ಸಂಘ ನಿ., ಬೈಂದೂರು ಇದರ ಮೂರನೇ ಆರ್ಥಿಕ ವರ್ಷದ, ವಾರ್ಷಿಕ ಸರ್ವ ಸದಸ್ಯರ ಸಭೆಯು, ಸಂಘದ ಅಧ್ಯಕ್ಷರಾದ ಮಣಿಕಂಠ S ದೇವಾಡಿಗ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ ಸವಿತ್ರ ತೇಜ್ ಕಾರ್ಯಕ್ರಮ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಅಧ್ಯಕ್ಷ ಮಣಿಕಂಠ ಎಸ್ ದೇವಾಡಿಗರು, ‘ ನಮ್ಮ ಅರ್ಬನ್ ಸೌಹಾರ್ದ ಸಹಕಾರಿ ಸಂಘವು, 3ನೇ ಆರ್ಥಿಕ ವರ್ಷದಲ್ಲಿ ಲಾಭದೊಂದಿಗೆ, ಉತ್ತಮ ಪ್ರಗತಿ ಸಾಧಿಸಿದ್ದು ಖುಷಿ ತಂದಿದೆ. ಈ ಬೆಳವಣಿಗೆ ಪ್ರತ್ಯಕ್ಷ್ಯ ಹಾಗೂ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಈ ಪ್ರಗತಿಯ ಶ್ರೇಯ ಸಲ್ಲಿಸುತ್ತೇನೆ”ಎಂದರು. ಹಾಗೆಯೇ, ಸಂಘದ ಮಾನ್ಯ ಸದಸ್ಯರಿಗೆ 8% ಡಿವಿಡೆಂಟ್ ನೀಡುವುದಾಗಿ ಘೋಷಣೆ ಮಾಡಿದರು.

ಸಭೆಯಲ್ಲಿ ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ, ಸರ್ಕಾರಿ ನಿವೃತ್ತ ಸದಸ್ಯರಿಗೆ ಸನ್ಮಾನ, ಸ.ಪ.ಪೂ.ಕಾಲೇಜು ಬೈಂದೂರು ಇವರಿಗೆ ಶೈಕ್ಷಣಿಕ ಸಹಾಯಧನ ವಿತರಣೆ, ಸ್ವ ಸಹಾಯ ಗುಂಪಿನ ಸದಸ್ಯರಿಗೆ ವಿಶೇಷ ಪ್ರಶಸ್ತಿ, ಮತ್ತು ಸಂಘದ ಸದಸ್ಯರಿಗೆ ಪ್ರಶಸ್ತಿ ವಿತರಣೆ ಮಾಡಲಾಯಿತು. ಸಭೆಯಲ್ಲಿ ಉಪಾಧ್ಯಕರು & ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು. ಸಂಘದ ಕಾರ್ಯದರ್ಶಿ ವರದಿ ವಾಚಿಸಿದರು.


